ರಾಜ್ಯಾದ್ಯಂತ ನಾಳೆಯಿಂದ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಪರೀಕ್ಷೆ ಆರಂಭ | ಹಿಜಾಬ್ ಕಾರಣಕ್ಕಾಗಿ ಗೈರಾದರೆ ಮತ್ತೊಮ್ಮೆ ಪರೀಕ್ಷೆ ಬರೆಯಲು ನೋ ಚಾನ್ಸ್ !!

ರಾಜ್ಯಾದ್ಯಂತ ಪಿಯು ಕಾಲೇಜುಗಳಲ್ಲಿ ನಾಳೆಯಿಂದ ಅಂತಿಮ ಪ್ರಾಯೋಗಿಕ ಪರೀಕ್ಷೆಗಳು ಆರಂಭವಾಗಲಿದ್ದು, ಹಿಜಾಬ್ ವಿವಾದದಿಂದ ವಿದ್ಯಾರ್ಥಿನಿಯರು ಪರೀಕ್ಷೆಗೆ ಗೈರಾದರೆ ಮತ್ತೊಮ್ಮೆ ಪರೀಕ್ಷೆ ಬರೆಯಲು ಅವಕಾಶ ಇಲ್ಲವೇ ಇಲ್ಲ !!

ಹೌದು. ಪದವಿ ಪೂರ್ವ ಶಿಕ್ಷಣ ಇಲಾಖೆ ಈಗಾಗಲೇ ಪ್ರಾಯೋಗಿಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟಿಸಿದ್ದು, ವೇಳಾಪಟ್ಟಿಯಂತಯೇ ನಾಳೆಯಿಂದ ಪ್ರಾಯೋಗಿಕ ಪರೀಕ್ಷೆ ನಡೆಯಲಿದೆ.

ಪರೀಕ್ಷೆಗೆ ಗೈರಾದರೆ ಮತ್ತೊಮ್ಮೆ ಪರೀಕ್ಷೆ ಬರೆಯಲು ಅವಕಾಶ ಇಲ್ಲ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಹೇಳಿದೆ. ಈ ಹಿನ್ನೆಲೆಯಲ್ಲಿ ಹಿಜಾಬ್ ಕಾರಣಕ್ಕಾಗಿ ಪ್ರಾಯೋಗಿಕ ಪರೀಕ್ಷೆಗೆ ಗೈರಾದರೆ ಮಾತ್ರ ವಿದ್ಯಾರ್ಥಿನಿಯರಿಗೆ ಸಂಕಷ್ಟ ಕಟ್ಟಿಟ್ಟ ಬುತ್ತಿ.

Leave A Reply

Your email address will not be published.