ಬಂಟ್ವಾಳ :ಕಕ್ಕೆ ಪದವಿನಲ್ಲಿ ಕ್ರಿಕೆಟ್ ಆಡುತ್ತಿದ್ದಾಗ ಹೃದಯಾಘಾತದಿಂದ ವ್ಯಕ್ತಿ ಸಾವು

ವ್ಯಕ್ತಿಯೊಬ್ಬರು ಕ್ರಿಕೆಟ್ ಆಡುತ್ತಿರುವಾಗ ಮೈದಾನದಲ್ಲಿ ಹೃದಯಾಘಾತದಿಂದ ಮೃತಪಟ್ಟ ದಾರುಣ ಘಟನೆ ಬಂಟ್ವಾಳ ತಾಲೂಕಿನ ಕಕ್ಕೆಪದವಿನಲ್ಲಿ ನಡೆದಿದೆ.

ಮೃತರನ್ನು ‌ಅನ್ನಡ್ಕ ನಿವಾಸಿ, ಕೃಷಿಕ ಮನೋಹರ್ ಪ್ರಭು(45) ಎಂದು ಗುರುತಿಸಲಾಗಿದೆ.

ನಿನ್ನೆ ರಜಾದಿನದ ಕಾರಣ ಮಧ್ಯಾಹ್ನ 2.00 ಗಂಟೆ ಸುಮಾರಿಗೆ ಕ್ರಿಕೆಟ್ ಆಡುತ್ತಿದ್ದರು. ಆ ವೇಳೆ ಮೈದಾನದಲ್ಲಿಯೇ ಅವರಿಗೆ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

Leave A Reply

Your email address will not be published.