ಸುಳ್ಯ :ಇಲಿಪಾಷಣ ಸೇವಿಸಿ ಅಸ್ವಸ್ಥಳಾಗಿ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಸಾವು

ಸುಳ್ಯ :ಇಲಿಪಾಷಣ ಸೇವಿಸಿ ಅಸ್ವಸ್ಥಳಾಗಿ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ನಿನ್ನೆ ನಡೆದಿದೆ.

ಮೃತ ವಿದ್ಯಾರ್ಥಿನಿ ಸುಳ್ಯ ತಾಲೂಕು ಮರ್ಕಂಜ ಗ್ರಾಮದ ಬೇರಿಕೆ ರಮೇಶ ಎಂಬವರ ಪುತ್ರಿ ಶ್ರಾವ್ಯ (17).

ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಈಕೆ ವಾರದ ಹಿಂದೆ ಮರ್ಕಂಜದ ತನ್ನ ಮನೆಗೆ ಬಂದಿದ್ದಳು. ಮನೆಯಲ್ಲಿ ಯಾರು ಇಲ್ಲದ ವೇಳೆ ಇಲಿಪಾಷಣ ಸೇವಿಸಿದ್ದಳೆಂದು ಹೇಳಲಾಗುತ್ತಿದೆ . ಮನೆಯವರಿಗೆ ವಿಷಯ ತಿಳಿದು ಆಕೆಯನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದರು.ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಕೆ ನಿನ್ನೆ ಕೊನೆಯುಸಿರೆಳೆದಿದ್ದಾಳೆ.

ಆಕೆ ಇಲಿ ಪಾಷಾಣ ಸೇವಿಸಿರುವುದರ ಹಿಂದಿರುವ ಕಾರಣ ಏನೆಂಬುದು ತನಿಖೆ ಬಳಿಕವಷ್ಟೇ ತಿಳಿದು ಬರಬೇಕಿದೆ.

Leave A Reply

Your email address will not be published.