ತನ್ನ ಹುಟ್ಟುಹಬ್ಬದ ದಿನದಂದೇ ಸಾವು ಕಂಡ ಬಾಲಕಿ| ಅಪಘಾತದ ತೀವ್ರತೆಗೆ ಆರನೇ ತರಗತಿ ಬಾಲಕಿ ಬಲಿ

ಹನ್ನೊಂದು ವರ್ಷದ ಬಾಲಕಿಯೋರ್ವಳು ತನ್ನ ಹುಟ್ಟುಹಬ್ಬದ ದಿನದಂದೇ ಅಪಘಾತಕ್ಕೆ ಸಿಲುಕಿ ದಾರುಣವಾಗಿ ಮೃತಪಟ್ಟ ಘಟನೆ ಮಂಜೇಶ್ವರದಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ.

ಬಂಗ್ರಮಂಜೇಶ್ವರ ಕಟ್ಟೆಬಜಾರಿನ ರವಿಚಂದ್ರ ಹೆಗ್ಡೆ ರವರ ಪುತ್ರಿ ದೀಪಿಕಾ ( 11) ಮೃತಪಟ್ಟ ಬಾಲಕಿ.

ಮಂಜೇಶ್ವರಕ್ಕೆ ತನ್ನ‌ ಹುಟ್ಟುಹಬ್ಬದ ಪ್ರಯುಕ್ತ ಸಾಮಾನು ತರಲು ತಂದೆಯೊಂದಿಗೆ ಸ್ಕೂಟರ್ ನಲ್ಲಿ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

ಮಂಜೇಶ್ವರ ಒಳರಸ್ತೆಯ ಗಿಳಿವಿಂಡು ಸಮೀಪ ಇವರು ಸಂಚರಿಸುತ್ತಿದ್ದ ಸ್ಕೂಟರ್ ಗೆ ಆಟೋ ರಿಕ್ಷಾ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಇಬ್ಬರೂ ಡಿಕ್ಕಿಯಿಂದ ರಸ್ತೆಗೆ ಬಿದ್ದಿದ್ದು, ಗಂಭೀರ ಗಾಯಗೊಂಡ ಬಾಲಕಿ ದೀಪಿಕಾಳನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾಳೆ. ತಂದೆ ರವಿಚಂದ್ರ ಗಾಯಗೊಂಡಿದ್ದು, ಕಾಸರಗೋಡು ಆಸ್ಪತ್ರೆಗೆ ದಾಖಲಿಸಲಾಗಿದೆ.

Leave A Reply

Your email address will not be published.