ಬೆಳ್ತಂಗಡಿ : ಗೃಹಿಣಿಯ ಮಾನಭಂಗಕ್ಕೆ ಯತ್ನ | ಕೊಲೆಬೆದರಿಕೆಯೊಡ್ಡಿ ಪರಾರಿಯಾದ ಯುವಕ

ಬೆಳ್ತಂಗಡಿ : ಮನೆ ಸಮೀಪ ಗುಡ್ಡದಲ್ಲಿ ಕಟ್ಟಿಗೆ ಕಡಿಯುವಾಗ ಅಲ್ಲಿಗೆ ಬಂದ ಯುವಕನೊಬ್ಬ ಕತ್ತಿ ಕೇಳುವ ನೆಪದಲ್ಲಿ ಗೃಹಿಣಿಯೊಬ್ಬರ ಮಾನಭಂಗಕ್ಕೆ ಯತ್ನಿಸಿದ ಘಟನೆಯೊಂದು ನಾವೂರು ಗ್ರಾಮದಲ್ಲಿ ನಡೆದಿದೆ.

ಫೆ.22 ರಂದು ಸಂಜೆ 4 ಗಂಟೆ ವೇಳೆಗೆ ತನ್ನ ಮನೆಯ ಸಮೀಪದ ಗುಡ್ಡಕ್ಕೆ ಕಟ್ಟಿಗೆ ತರಲೆಂದು ಹೋಗಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಆರೋಪಿಯನ್ನು ಇಂದಬೆಟ್ಟು ಗ್ರಾಮದ ಲಿಂಗತ್ಯಾರ್ ಮನೆ ನಿವಾಸಿ ಸಂತೋಷ್ ( 25) ಎಂಬಾತನೆಂದು ಗುರುತಿಸಲಾಗಿದೆ.

ಮಹಿಳೆಯನ್ನು ಬಲವಂತವಾಗಿ ಹಿಡಿದು ನೆಲಕ್ಕೆ ಕೆಡವಿ ಮೈಮೇಲೆ ಬೀಳಲು ಯತ್ನಿಸಿ ಆಕೆ ಕಾಲಿನಿಂದ ತುಳಿದಾಗ ಆತ ದೂರಕ್ಕೆ ಬಿದ್ದದ್ದನ್ನು ನೋಡಿ ಆಕೆಯ ಪತಿ ಸ್ಥಳಕ್ಕೆ ಬಂದಾಗ ಈ ವಿಷಯ ಯಾರಲ್ಲಾದರೂ ಹೇಳಿದರೆ ಕೊಲ್ಲೊದಾಗಿ ಬೆದರಿಕೆ ಹಾಕಿದ್ದಾನೆ ಎಂದು ಹೇಳಿ ಓಡಿಹೋಗಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಸಂಬಂಧ ಬೆಳ್ತಂಗಡಿ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

Leave A Reply

Your email address will not be published.