ವಿಟ್ಲ : ವ್ಯಕ್ತಿಯೋರ್ವರ ಮೃತದೇಹ ಕೊಲೆಗೈದ ಸ್ಥಿತಿಯಲ್ಲಿ ಮನೆಯಲ್ಲಿ ಪತ್ತೆ

ಬಂಟ್ವಾಳ : ವ್ಯಕ್ತಿಯೋರ್ವರ ಮೃತದೇಹವೊಂದು ಕೊಲೆಗೈದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ವಿಟ್ಲ ಚಂದಳಿಕೆಯ ಕಾಂತಾಮೂಲೆ ಎಂಬಲ್ಲಿ ಬುಧವಾರ ನಡೆದಿದೆ.

ಮೃತವ್ಯಕ್ತಿ ಕಾಂತಮೂಲೆ ನಿವಾಸಿ ದಿನೇಶ್ ( 45) ಎಂದು ಗುರುತಿಸಲಾಗಿದೆ.

ದಿನೇಶ್ ಹಾಗೂ ಆತನ ತಂದೆ ವಸಂತ ಗೌಡ ಇಬ್ಬರು ಮಾತ್ರ ಮನೆಯಲ್ಲಿ ವಾಸವಾಗಿರುವುದಾಗಿ ತಿಳಿದು ಬಂದಿದೆ. ಕೂಲಿ ಕೆಲಸಕ್ಕೆ ಇಬ್ಬರೂ ಹೋಗುತ್ತಿದ್ದು, ಕುಡಿತದ ದಾಸರಾಗಿದ್ದರು. ಹಾಗಾಗಿ ಕುಡಿದ ಮತ್ತಿನಲ್ಲಿ ಗಲಾಟೆ ನಡೆದು ಕೊಲೆಯಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.

Leave A Reply

Your email address will not be published.