ಮೀನುಗಾರಿಕೆ ನಡೆಸುತ್ತಿದ್ದ ಮೀನುಗಾರರ ಮೇಲೆ ಹಲ್ಲೆ ಆರೋಪ| ಗಾಯಾಳುಗಳು ಆಸ್ಪತ್ರೆಗೆ ದಾಖಲು

ಮೀನುಗಾರಿಕೆ ನಡೆಸುತ್ತಿದ್ದ ಮೀನುಗಾರರ ಮೇಲೆ ಹಲ್ಲೆ ಮಾಡಿರುವ ಘಟನೆಯೊಂದು ಕಾರವಾರ ಸಮೀಪದ ಕೋಡಾರ ಸಮುದ್ರದಲ್ಲಿ ನಡೆದಿದೆ.

ಉತ್ತರಕನ್ನಡ ಜಿಲ್ಲೆಯ ಕಾರವಾರ ನೌಕಾದಳ ಸಿಬ್ಬಂದಿ ಹಲ್ಲೆ ಮಾಡಿದ್ದಾರೆ ಎಂದು ಮೀನುಗಾರರು ಆರೋಪಿಸಿದ್ದಾರೆ. ಮುದಗಾದಿಂದ ಹೊರಟ ವೈಶಾಲಿ ಫಿಶಿಂಗ್ ಬೋಟ್ ಸಿಬ್ಬಂದಿ 16 ಮೀಟರ್ ಆಳದ ಸಮುದ್ರದಲ್ಲಿ ಮೀನು ಹಿಡಿಯಲು ಮುಂದಾಗಿದ್ದಾರೆ.

ಈ ವೇಳೆ ಅಲ್ಲಿಗೆ ಬಂದ ನೌಕಾದಳ ಸಿಬ್ಬಂದಿ, ಜಯವಂತ ಹರಿಕಾಂತ, ಬುಧವಂತ ಲಿಂಗಾ ದುರ್ಗೆಕರ ಎಂಬುವವರಿಗೆ ಹಲ್ಲೆ ಮಾಡಿದ್ದಾರೆಂದು ಆರೋಪಿಸಲಾಗಿದೆ. ಕಾರವಾರ ಜಿಲ್ಲಾಸ್ಪತ್ರೆಗೆ ಗಾಯಾಳುಗಳನ್ನು ದಾಖಲಿಸಲಾಗಿದೆ.

ಕಾರವಾರ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Leave A Reply

Your email address will not be published.