ಬೈಂದೂರು: ಮೀನುಗಾರಿಕೆ ಮಾಡುತ್ತಿದ್ದಾಗ ಕಾಲಿಗೆ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದು ಮೀನುಗಾರ ದುರಂತ ಸಾವು

ಮೀನುಗಾರಿಕೆ ಮಾಡುತ್ತಿದ್ದಾಗ ಕಾಲಿಗೆ ಬಲೆ ಸಿಲುಕಿ ಮೀನುಗಾರ ಸಮುದ್ರಕ್ಕೆ ಬಿದ್ದು ಮೃತಪಟ್ಟ ಘಟನೆ ಬೈಂದೂರಿನಲ್ಲಿ ನಡೆದಿದೆ.

ಮೃತ ಮೀನುಗಾರನನ್ನು ಶಿರೂರು ಅಳ್ವೆಗದ್ದೆ ನಿವಾಸಿ ನಾಗರಾಜ ಮೊಗೇರ್ (25) ಎಂದು ಗುರುತಿಸಲಾಗಿದೆ.

ಈತ ಎರಡು ದಿನದ ಹಿಂದಷ್ಟೆ ಮೀನುಗಾರಿಕೆಗೆ ತೆರಳಿದ್ದ ಎನ್ನಲಾಗಿದ್ದು, ಮೃತದೇಹವನ್ನು ಬೋಟ್ ಮೂಲಕ ಭಟ್ಕಳ ಬಂದರಿಗೆ ತಂದು ಬಳಿಕ ಸರಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ವಾರಿಸುದಾರರಿಗೆ ಹಸ್ತಾಂತರಿಸಲಾಗಿದೆ.

Leave A Reply

Your email address will not be published.