ಪ್ರಯಾಣಿಕರ ಗಮನಕ್ಕೆ; ತೀರ್ಥಕ್ಷೇತ್ರಗಳಿಗೆ ಹೋಗಲು  IRCTC ಯಿಂದ ಭರ್ಜರಿ ಪ್ಯಾಕೇಜ್

ತೀರ್ಥಯಾತ್ರೆಗೆ ಹೋಗಬೇಕು ಎಂದು ಕೊಂಡವರಿಗೆ IRCTC ಒಳ್ಳೆ ಯೋಜನೆ ರೂಪಿಸಿದ್ದು, ಕಡಿಮೆ ಬೆಲೆಯಲ್ಲಿ ಸುರಕ್ಷಿತವಾಗಿ ಹೋಗಿ ಬರಬಹುದು. ಯೋಜನೆ ಏನು ? ಎಲ್ಲೆಲ್ಲಿ ? ಹಣ ಎಷ್ಟು ? ಇಲ್ಲಿದೆ ನೋಡಿ ವಿವರವಾದ ಮಾಹಿತಿ,

IRCTCಯ  ಪ್ಯಾಕೇಜ್‌ನಲ್ಲಿ ಪ್ರವಾಸಿಗರು ರಾಮಜನ್ಮ ಭೂಮಿ ದರ್ಶನ, ಪುರಿ, ಗಂಗಾಸಾಗರಕ್ಕೆ ಪ್ರಯಾಣಿಸಬಹುದು.
ಈ ರೈಲು ಉತ್ತರ ಭಾರತ ಮತ್ತು ದಕ್ಷಿಣ ಭಾರತದ ಹಲವು ನಗರಗಳ ಮೂಲಕ ಸಂಚರಿಸಲಿದೆ.  ಈ ರೈಲು ಯಾತ್ರಾರ್ಥಿಗಳನ್ನು ಅಯೋಧ್ಯೆ, ವಾರಣಾಸಿ, ಬೈದ್ಯನಾಥ, ಗಂಗಾಸಾಗರ, ಪುರಿ, ಕೋನಾರ್ಕ್, ಗಯಾ ಮತ್ತು ಕೋಲ್ಕತ್ತಾದ ಧಾರ್ಮಿಕ ಸ್ಥಳಗಳಿಗೆ ಕರೆದೊಯ್ಯಲಿದೆ.

ಈ ರೈಲು ಮಾರ್ಚ್ 22ರಂದು ಹೊರಡಲಿದ್ದು, ಮಾರ್ಚ್ 31 ರಂದು ಪ್ರಯಾಣವು ಕೊನೆಗೊಳ್ಳುತ್ತದೆ. ಈ ಪ್ಯಾಕೇಜ್ ನಡಿ ಪ್ರತಿದಿನಕ್ಕೆ ಪ್ರಯಾಣಿಕರಿಗೆ ಕೇವಲ 1 ಸಾವಿರ ರೂ. ವೆಚ್ಚವಾಗುತ್ತದೆ. ಈ ಸಂಪೂರ್ಣ ಪ್ಯಾಕೇಜ್ ನ ಬೆಲೆ ಕೇವಲ 9,450 ರೂ. ಆಗಿರುತ್ತದೆ. ಈ ಪ್ಯಾಕೇಜ್ ನಲ್ಲಿ ಪ್ರಯಾಣಿಕರಿಗೆ ಉಪಹಾರ, ಮಧ್ಯಾಹ್ನ ಮತ್ತು ರಾತ್ರಿಯ ಊಟದ ವ್ಯವಸ್ಥೆ ಇರುತ್ತದೆ.ಈ ಪ್ಯಾಕೇಜ್‌ನಲ್ಲಿ ಸ್ಥಳೀಯ ಸಾರಿಗೆ ಮತ್ತು ಮಾರ್ಗದರ್ಶಿ ಶುಲ್ಕಗಳನ್ನು ಸಹ ಸೇರಿಸಲಾಗಿದೆ.

Leave A Reply

Your email address will not be published.