ಸೆಮಿನಾರಿಗೆಂದು ಬಂದ ವೈದ್ಯಕೀಯ ವಿದ್ಯಾರ್ಥಿನಿ ಸಾವು|

ಸೆಮಿನಾರಿಗೆಂದು ಬಂದ ವೈದ್ಯಕೀಯ ವಿದ್ಯಾರ್ಥಿನಿಯೋರ್ವಳು ಸಾವನ್ನಪ್ಪಿದ ದಾರುಣ ಘಟನೆ ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕರ್ನಾಟಕದ ಪ್ರವಾಸಕ್ಕೆಂದು ದಾಂಡೇಲಿಗೆ ಬಂದಿದ್ದ ಬಿರಂಪಾಲಿ- ಅಕೋರ್ಡಾ ಎಂಬಲ್ಲಿ ಛತ್ತೀಸ್ ಗಢದ ಯುವತಿ ಸಾವನ್ನಪ್ಪಿದ್ದಾಳೆ.

ಛತ್ತೀಸ್ ಗಢದ ದೇವಿಕಾ ಸಂಜಯ್ ವಾಸವಣೆ ( 25) ಮೃತಪಟ್ಟ ಯುವತಿ. ಸೈಕ್ಲಿಂಗ್ ಮಾಡುವಾಗ ಆಯತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ದೇವಿಕಾ ಸಂಜಯ್ ವಾಸವಣೆ ಸಾವಿಗೀಡಾಗಿದ್ದಾಳೆ. ತಲೆಯ ಭಾಗಕ್ಕೆ ಪೆಟ್ಟಾಗಿ ಮೂಗಿನಿಂದ ರಕ್ತಸ್ರಾವವಾಗಿದ್ದು, ಯುವತಿ ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾಳೆ.

ಸ್ನೇಹಿತರ ಜೊತೆ ಹಿಡನ್ ವ್ಯಾಲಿ ಹೋಮ್ ಸ್ಟೇ ನಲ್ಲಿ ದೇವಿಕಾ ತಂಗಿದ್ದಳು. ವೈದ್ಯಕೀಯ ವಿದ್ಯಾರ್ಥಿನಿಯಾಗಿದ್ದ ದೇವಿಕಾ ಧಾರವಾಡಕ್ಕೆ ಸೆಮಿನಾರಿಗೆಂದು ಬಂದಿದ್ದಳು. ರಜಾ ದಿನದ ಕಾರಣ ಧಾರವಾಡದಿಂದ ದಾಂಡೇಲಿಗೆ ಪ್ರವಾಸಕ್ಕೆ ಬಂದಿದ್ದಳು ದೇವಿಕಾ.

ದಾಂಡೇಲಿ ಸರಕಾರಿ ಆಸ್ಪತ್ರೆಯಲ್ಲಿ ಯುವತಿಯ ಮರಣೋತ್ತರ ಪರೀಕ್ಷೆ ನಡೆದಿದೆ. ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ.

Leave A Reply

Your email address will not be published.