ವೃಷಣ ಕತ್ತರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ
ಮಸ್ಕಿ; ವ್ಯಕ್ತಿಯೊಬ್ಬ ತನ್ನ ಮರ್ಮಾಂಗವನ್ನ ತಾನೇ ಕತ್ತರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ರಾಯಚೂರು ಜಿಲ್ಲೆ ಮಸ್ಕಿ ತಾಲೂಕಿನ ಇರಕಲ್ ಗ್ರಾಮದಲ್ಲಿ ಈ ಘಟನೆ ಜರುಗಿದೆ.
ಗ್ವಾನಪ್ಪ (42) ಇವರು ಹಲವು ದಿನಗಳಿಂದ ಕಾಲು ನೋವಿನಿಂದ ಬಳಲುತ್ತಿದ್ದರು, ಕಾಲಿಗೆ ಹುಳ ಹಿಡಿದಿದ್ದು, ಆಸ್ಪತ್ರೆಗೆ ತೋರಿಸಿದರೂ ಗುಣಮುಖವಾಗಿರಲಿಲ್ಲ. ನೋವು ತಾಳಲಾಗದೆ ಬುಧವಾರ ಮರ್ಮಾಂಗ ಕತ್ತರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.