ಬಿಪಿಎಲ್ ಕಾರ್ಡ್ ದಾರರಿಗೆ ಮುಖ್ಯ ಮಾಹಿತಿ | ಮನೆ ಬಾಗಿಲಿಗೆ ಅಕ್ಕಿ ವಿತರಣೆ ಕೈ ಬಿಟ್ಟ ಸರಕಾರ!

ಮನೆ ಬಾಗಿಲಿಗೆ ಪಡಿತರ ವಿತರಿಸುವ ಯೋಜನೆಯನ್ನು ಸರಕಾರ ಕೈ ಬಿಟ್ಟಿದೆ. ಆಂಧ್ರಪ್ರದೇಶ, ತಮಿಳುನಾಡಿನಲ್ಲಿ ಈ ಯೋಜನೆ ಯಶಸ್ವಿಯಾಗದ ಕಾರಣ ಈಗಿರುವ ಪಡಿತರ ಅಂಗಡಿಗಳ ಮೂಲಕವೇ ರೇಷನ್ ವಿತರಣೆ ಮಾಡಲಾಗುವುದು ಎಂದು ಆಹಾರ ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ.

ಬಡ ಕುಟುಂಬಗಳಿಗೆ ಎಪ್ರಿಲ್ 1 ರಿಂದ ಪೋರ್ಟಿಫೈಡ್ ರೈಸ್ ವಿತರಣೆ ಮಾಡಲಾಗುವುದು. ಮೊದಲಿಗೆ ಯಾದಗಿರಿ, ಕಲಬುರಗಿ, ಬೀದರ್ ಜಿಲ್ಲೆಗಳಲ್ಲಿ ಬಡಕುಟುಂಬಗಳಿಗೆ ಪ್ರಾಯೋಗಿಕವಾಗಿ ಪೋರ್ಟಿ ಫೈಡ್ ರೈಸ್ ವಿತರಿಸಲಾಗುತ್ತದೆ. ನಂತರ ರಾಜ್ಯಾದ್ಯಂತ ಸಾರವರ್ಧಿತ ಅಕ್ಕಿ ವಿತರಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

Leave A Reply

Your email address will not be published.