ಬುದ್ಧಿಮಾಂದ್ಯನ ಮೇಲೆ ಮನಬಂದಂತೆ ನಡುರಸ್ತೆಯಲ್ಲೇ ಥಳಿಸಿದ ಪಿಎಸ್ ಐ ಮತ್ತು ಪೇದೆ!

ಬುದ್ಧಿಮಾಂದ್ಯ ವ್ಯಕ್ತಿಯೊಬ್ಬರ ಮೇಲೆ ಮನಬಂದಂತೆ ಪಿಎಸ್ ಐ ಹಾಗೂ ಕಾನ್ಸ್ ಟೇಬಲ್ ಅವರು ಸೇರಿ‌ಥಳಿಸಿರುವಂತಹ ಘಟನೆಯೊಂದು ಗೃಹ ಸಚಿವರ ತವರು ಜಿಲ್ಲೆ ಶಿವಮೊಗ್ಗದಲ್ಲಿ ನಡೆದಿದೆ.

ಶಿವಮೊಗ್ಗ ಜಿಲ್ಲೆಯ ಹೊಸನಗರ ಪೊಲೀಸ್ ಠಾಣೆಯ ಪಿಎಸ್ ಐ ರಾಜೇಂದ್ರ ನಾಯ್ಕ್ ಹಾಗೂ ಕಾನ್ಸ್ ಟೇಬಲ್ ಸೇರಿಕೊಂಡು ಬುದ್ಧಿಮಾಂದ್ಯನಾಗಿದ್ದಂತ ಜಟ್ಟಪ್ಪ ಎಂಬಾತನ ಮೇಲೆ ಮನಬಂದಂತೆ ಥಳಿಸಿದ್ದಾರೆ.

ನಡುರಸ್ತೆಯಲ್ಲಿಯೇ ಅಮಾನವೀಯವಾಗಿ ಪೊಲೀಸರು ಈ ರೀತಿ ಮಾಡಿದ್ದಾರೆ. ಪೊಲೀಸರ ಈ ಕ್ರಮಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬುದ್ಧಿಮಾಂದ್ಯತೆಯಿಂದ ಬಳಲುತ್ತಿದ್ದ ಜಟ್ಟಪ್ಪ ರಸ್ತೆಯಲ್ಲಿ ಓಡಾಡುತ್ತಿದ್ದಂತವರ ಮೇಲೆ ಕಲ್ಲು ಎಸೆದು, ಹಲ್ಲೆ ನಡೆಸುತ್ತಿದ್ದನಂತೆ. ಇದರಿಂದ ರೋಸಿ ಹೋದಂತ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಈ ದೂರು ಆಧರಿಸಿ ಬಂದ ಪೊಲೀಸರು ಆತನನ್ನು ಬಂಧಿಸಿ ಕ್ರಮಕೈಗೊಳ್ಳೋ ಬದಲು ಈ ರೀತಿಯಾಗಿ ಅಮಾನವೀಯವಾಗಿ ವರ್ತನೆ ಮಾಡಿದ್ದಾರೆ. ಈ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಕೂಡಾ ಆಗಿದೆ.

Leave A Reply

Your email address will not be published.