ದೇವಸ್ಥಾನಕ್ಕೆ ತೆರಳಿದ್ದ ಎಂಟು ತಿಂಗಳ ತುಂಬು ಗರ್ಭಿಣಿ ದುರಂತ ಸಾವು !!

ದೇವಸ್ಥಾನಕ್ಕೆ ಪ್ರಾರ್ಥನೆಗೆಂದು ಆಗಮಿಸಿದ್ದ ತುಂಬು ಗರ್ಭಿಣಿ ಕುಸಿದು ಬಿದ್ದು ಮೃತಪಟ್ಟ ಹೃದಯವಿದ್ರಾವಕ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ತೆಂಕಹಳ್ಳಿ ಸಮೀಪದ ಶನೈಶ್ವರಸ್ವಾಮಿ ದೇವಸ್ಥಾನದಲ್ಲಿ ನಡೆದಿದೆ.

ತಿ.ನರಸೀಪುರ ತಾಲೂಕಿನ ಕಟ್ಟೇಪುರ ಗ್ರಾಮದ ಉಮೇಶ್ ಎಂಬುವರ ಪತ್ನಿ ಪಂಕಜಾ (26) ಮೃತ ಗರ್ಭಿಣಿ.

ಪಂಕಜಾ ಅವರಿಗೆ ಒಂದೂವರೆ ವರ್ಷದ ಗಂಡು ಮಗುವಿದ್ದು, ಇದೀಗ ಎಂಟು ತಿಂಗಳ ಗರ್ಭಿಣಿಯಾಗಿದ್ದರು. ಇತ್ತೀಚೆಗೆ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಸಂಬಂಧಿಕರ ಸಲಹೆಯಂತೆ ತೆಂಕಹಳ್ಳಿ ಸಮೀಪದ ಶನೈಶ್ವರಸ್ವಾಮಿ ದೇವಸ್ಥಾನಕ್ಕೆ ಪತಿ ಉಮೇಶ್ ಕುಟುಂಬದವರ ಜೊತೆಗೂಡಿ ಕಾರಿನಲ್ಲಿ ಆಗಮಿಸಿದ್ದರು.

ಗುರುವಾರ ದೇವಸ್ಥಾನದಲ್ಲಿ ಪೂಜೆ ಮುಗಿಸಿ ದೇವಸ್ಥಾನದಿಂದ ಹೊರಡುವ ಸಮಯದಲ್ಲಿ ಪ್ರಜ್ಞೆ ತಪ್ಪಿ ಕುಸಿದು ಬಿದ್ದಿದ್ದಾರೆ. ಕೂಡಲೇ ತಲಕಾಡು ಸರ್ಕಾರಿ ಆಸ್ಪತ್ರೆ ಕರೆದೊಯ್ಯಲಾಯಿತ್ತಾದರೂ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದರು.

ತಹಸೀಲ್ದಾರ್ ಶವ ಮಹಜರು ನಡೆಸಿ ಕುಟುಂಬದವರಿಂದ ಮಾಹಿತಿ ಪಡೆದರು. ಮರಣೋತ್ತರ ಪರೀಕ್ಷೆಯ ನಂತರ ವಾರಸುದಾರರಿಗೆ ಮೃತದೇಹ ಒಪ್ಪಿಸಲಾಯಿತು. ಬೆಳಕವಾಡಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Leave A Reply

Your email address will not be published.