ರೈತರಿಗೆ ಸರಕಾರದಿಂದ ಬಂಪರ್ ಸಿಹಿ ಸುದ್ದಿ | ಜಮೀನು ನಕ್ಷೆ ಒಳಗೊಂಡ ಹೊಸ ಪಹಣಿ ವಿತರಣೆ!

ಕಂದಾಯ ಮತ್ತು ಭೂಮಾಪನ ಇಲಾಖೆಯಿಂದ ಹೊಸದಾದ ಒಂದು ಯೋಜನೆಯನ್ನು ರೂಪಿಸಲಾಗಿದೆ. ಇದರ ಪ್ರಾಯೋಗಿಕವನ್ನು ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ಮಾಡಲಾಗುತ್ತದೆ. ನಂತರ ರಾಜ್ಯಾದ್ಯಂತ ವಿಸ್ತರಿಸಲಾಗುತ್ತದೆ.

ಹೊಸ ಪಹಣಿಯಲ್ಲಿ ಕೂಡಾ ಹಳೆ ಪಹಣಿಯಂತೆನೇ ಎಲ್ಲಾ ವಿವರಗಳು ಇರುತ್ತದೆ. ಎಡಗಡೆ ಡಿಜಿಟಲ್ ಸ್ಕೆಚ್ ಇರಲಿದೆ. ವಿಸ್ತೀರ್ಣ, ಜಮೀನು ಎಲ್ಲಿದೆ ? ಒತ್ತುವರಿ ಮಾಹಿತಿ, ಕ್ಯೂಆರ್ ಕೋಡ್, ಬಾರ್ಕೋಡ್ ಮೊದಲಾದವುಗಳನ್ನು ಒಳಗೊಂಡಂತೆ ಹೊಸ ಪಹಣಿ ರೈತರ ಕೈಸೇರಲಿದೆ.

ಇನ್ನು ಮುಂದೆ ಜಮೀನಿನ ನಕ್ಷೆಯನ್ನು ನೋಡಲು ರೈತರು ಭೂದಾಖಲೆಗಳ ಇಲಾಖೆ ಅಲೆದಾಡಬೇಕಿಲ್ಲ. ಪಹಣಿಯಲ್ಲಿಯೇ ಜಮೀನಿನ ನಕ್ಷೆ, ವಿವರಗಳನ್ನು ಒಳಗೊಂಡಂತೆ ಹೊಸ ಪಹಣಿ ನೀಡಲಾಗುತ್ತದೆ.

ಪಹಣಿಯಲ್ಲಿ ಪ್ರಸ್ತುತ ಜಮೀನಿನ ರೆಕಾರ್ಡ್ಸ್ ಆಫ್ ರೈಟ್ಸ್, ಗೇಣಿ ಮತ್ತು ಪಹಣಿ ಪತ್ರಿಕೆ ಫಾರಂ ನಂಬರ್ 16 ರಲ್ಲಿ ಜಮೀನಿನ ವಿಸ್ತೀರ್ಣ, ಕಂದಾಯ, ಸ್ವಾಧೀನದಾರನ ಹೆಸರು, ತಂದೆಯ ಹೆಸರು, ವಿಳಾಸ, ಸ್ವಾಧೀನತೆಯ ರೀತಿ, ಇತರೆ ಹಕ್ಕುಗಳು, ಮಣ್ಣಿನ ನಮೂನೆ, ನೀರಾವರಿ ಮೂಲ ಸೇರಿದಂತೆ ಜಮೀನಿಗೆ ಸಂಬಂಧಿಸಿದ ಮಾಹಿತಿ ಇರುತ್ತದೆ.

ಹೀಗೆ ಮಾಡುವುದರಿಂದ ವಂಚನೆಗೆ ಕಡಿವಾಣ ಹಾಕಬಹುದು. ಈಗ ಪಹಣಿ ಪತ್ರದಲ್ಲಿ ನಕ್ಷೆಯನ್ನು ಕೂಡಾ ನಮೂದಿಸಲಾಗುವುದು. ರೈತರಿಗೆ ಇದು ಮತ್ತಷ್ಟು ಅನುಕೂಲವಾಗಲಿದೆ.

Leave A Reply

Your email address will not be published.