ಕುಂದಾಪುರ : ಕಾಲೇಜಿನಲ್ಲಿ ವಿದ್ಯಾರ್ಥಿ ಮೇಲೆ ರ್ಯಾಗಿಂಗ್| ಮಾರಣಾಂತಿಕವಾಗಿ ಹಲ್ಲೆಗೊಳಗಾದ ವಿದ್ಯಾರ್ಥಿ

ಕುಂದಾಪುರ : ಕಾಲೇಜೊಂದರಲ್ಲಿ ರ್ಯಾಗಿಂಗ್ ಕೇಸ್ ವರದಿಯಾಗಿದೆ.

ಕುಂದಾಪುರದ ಅಚ್ಲಾಡಿಯಲ್ಲಿರುವ ಇಸಿಆರ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಸ್ಟಡಿ ಕಾಲೇಜಿನಲ್ಲಿ ರ್ಯಾಗಿಂಗ್ ನಡೆದಿದೆ.

ಕೇರಳ ಮೂಲದ ವಿದ್ಯಾರ್ಥಿಗಳು ದುರ್ಗಾದಾಸ್ ಎಂಬ ವಿದ್ಯಾರ್ಥಿ ಮೇಲೆ‌ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಈತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ದಿಲ್ಶಾದ್ ಮತ್ತು ಶಿಂಡೋ ಎಂಬ ಇಬ್ಬರು ವಿದ್ಯಾರ್ಥಿಗಳ ವಿರುದ್ಧ ಆರೋಪ ಕೇಳಿ ಬಂದಿದೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

Leave A Reply

Your email address will not be published.