ಪಾದೆಬಂಬಿಲ : ಸಾರ್ವಜನಿಕ ಶನೈಶ್ಚರ ಪೂಜೆಯ ಆಮಂತ್ರಣ ಬಿಡುಗಡೆ

ಸವಣೂರು : ಪಾಲ್ತಾಡಿ ಗ್ರಾಮದ ಪಾದೆಬಂಬಿಲ ಶಕ್ತಿನಗರ ಶ್ರೀ ದುರ್ಗಾಭಜನಾ ಮಂಡಳಿಯ ವತಿಯಿಂದ ಮಾ.19ರಂದು ನಡೆಯುವ ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆಯ ಆಮಂತ್ರಣ ಬಿಡುಗಡೆ ಮಾ.8ರಂದು ಶ್ರೀ ದುರ್ಗಾ ಭಜನಾ ಮಂದಿರದಲ್ಲಿ ನಡೆಯಿತು.

ಸವಣೂರು ಗ್ರಾ.ಪಂ.ಮಾಜಿ ಸದಸ್ಯ ಸತೀಶ್ ಬಲ್ಯಾಯ ಅವರು ಆಮಂತ್ರಣ ಬಿಡುಗಡೆಗೊಳಿಸಿದರು.

ಈ ಸಂಧರ್ಭದಲ್ಲಿ ಭಜನಾ ಮಂಡಳಿಯ ಅಧ್ಯಕ್ಷ ನವೀನ್ ಅಂಗಡಿಮೂಲೆ, ಕಾರ್ಯದರ್ಶಿ ಮಂಜುನಾಥ್ ಬಿ.ಕೆ,ಮಾಜಿ ಅಧ್ಯಕ್ಷರಾದ ವಿಜಯ ಬಿ.ಜೆ,ಬಾಲಕೃಷ್ಣ ಬಿ.ಕೆ,ಜಯಾನಂದ ಬಿ.ಜೆ,ವಿಶ್ವನಾಥ ಬಿ.ಜೆ,ಸವಣೂರು ಗ್ರಾ.ಪಂ.ಸದಸ್ಯ ಸತೀಶ್ ಅಂಗಡಿಮೂಲೆ,ಮಾಜಿ ಕಾರ್ಯದರ್ಶಿಗಳಾದ ಪುಟ್ಟಣ್ಣ ಪರಣೆ,ನಿತಿನ್ ಮೊದಲಾದವರಿದ್ದರು.

Leave A Reply

Your email address will not be published.