ಸ್ಥಳೀಯ ಚುನಾವಣೆ ವೇಳೆ ಜನರ ಮೇಲೆಯೇ ಹರಿದ ಶಾಸಕರ ಕಾರು !! | ಪೊಲೀಸರು, ಪತ್ರಕರ್ತರು ಸೇರಿ 22 ಕ್ಕೂ ಹೆಚ್ಚು ಜನರಿಗೆ ಗಾಯ

ಜನರ ಮೇಲೆಯೇ ಶಾಸಕರ ಕಾರು ಹರಿದು 22 ಕ್ಕೂ ಹೆಚ್ಚು ಮಂದಿ ಗಾಯಗೊಂಡ ದುರ್ಘಟನೆ ಶನಿವಾರ ಒಡಿಶಾದ ಖುರ್ದಾ ಜಿಲ್ಲೆಯ ಬಾನಾಪುರದಲ್ಲಿ ಸಂಭವಿಸಿದೆ.

ಬಿಜೆಡಿ ಶಾಸಕ ಪ್ರಶಾಂತ್ ಜಗದೇವ್ ಅವರ ಕಾರು ಜನರ ಗುಂಪಿನ ಮೇಲೆ ಏಕಾಏಕಿ ಹರಿದ ಪರಿಣಾಮ ಘಟನೆಯಲ್ಲಿ ಬಾಣಾಪುರ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಆರ್.ಆರ್. ಸಾಹು ಸೇರಿದಂತೆ 7 ಪೊಲೀಸ್ ಸಿಬ್ಬಂದಿ, ಪತ್ರಕರ್ತರು ಸೇರಿ 22ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳ ಪೈಕಿ ಐವರ ಸ್ಥಿತಿ ಗಂಭೀರವಾಗಿದೆ. ಗಂಭೀರವಾಗಿ ಗಾಯಗೊಂಡವರನ್ನು ಭುವನೇಶ್ವರದ ಏಮ್ಸ್‌ಗೆ ಕರೆದೊಯ್ಯಲಾಗಿದೆ.

ಬ್ಲಾಕ್ ಅಧ್ಯಕ್ಷರ ಆಯ್ಕೆಗೆ ಬಾನಾಪುರದಲ್ಲಿ ಶನಿವಾರ ಚುನಾವಣೆ ನಡೆಯುತ್ತಿತ್ತು. ಈ ವೇಳೆ ಕಚೇರಿ ಹೊರಗೆ ಜನರ ಗುಂಪು ಸೇರಿತ್ತು. ಈ ವೇಳೆ ಏಕಾಏಕಿ ಕಾರು ಚಲಾಯಿಸಿದ ಪರಿಣಾಮ ಕಾರು ಜನರ ಮೇಲೆ ಹರಿದಿದೆ. ಈ ದುರ್ಘಟನೆಯಲ್ಲಿ ಚಿಲಿಕಾ ಕ್ಷೇತ್ರದ ಶಾಸಕ ಪ್ರಶಾಂತ್ ಜಗದೇವ್ ಅವರು ಕೂಡ ಗಾಯಗೊಂಡಿದ್ದಾರೆ ಎನ್ನಲಾಗಿದೆ.

Leave A Reply

Your email address will not be published.