ಕಾಣಿಯೂರು : ಮರದಿಂದ ಬಿದ್ದು ಶಾಲಾ ಬಾಲಕ ಮೃತ್ಯು
![](https://hosakannada.com/wp-content/uploads/2022/03/IMG-20220318-WA0013.jpg)
ಕಡಬ: ಶಾಲೆ ಮುಗಿಸಿ ಮನೆಗೆ ಬಂದ ಬಾಲಕನೊಬ್ಬ ಪೇರಾಳ ಮರ ಹತ್ತಲು ಹೋಗಿ ಉರುಳಿ ಬಿದ್ದು ಮೃತಪಟ್ಟ ಧಾರುಣ ಘಟನೆ ಕಡಬ ತಾಲೂಕಿನ ಕಾಣಿಯೂರು ಸಮೀಪದ ದೋಳ್ಪಾಡಿ ಬಳಿ ಮಾ.17ರ ಸಂಜೆ ನಡೆದಿದೆ.
![](https://hosakannada.com/wp-content/uploads/2024/07/First.jpeg)
ದೋಳ್ವಾಡಿ ಮರಕ್ಕಡ ಮನೆಯ ದಿವಾಕರ ಗೌಡರವರ ಪುತ್ರ ಉಲ್ಲಾಸ್ ಡಿ.ಎಂ (8 ವ.) ಮೃತ ಬಾಲಕ.
![](https://hosakannada.com/wp-content/uploads/2024/07/Middle.jpeg)
ದೋಳ್ವಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೂರನೇ ತರಗತಿ ವಿದ್ಯಾರ್ಥಿಯಾಗಿರುವ ಉಲ್ಲಾಸ್ ಪ್ರತಿಭಾನ್ವಿತ ವಿದ್ಯಾರ್ಥಿಯಾಗಿದ್ದ.
ಉಲ್ಲಾಸ್ ಎಂದಿನಂತೆ ಮಾ.17ರಂದು ಕೂಡ ಶಾಲೆಗೆ ಹೋಗಿದ್ದು ಸಂಜೆ ಮನೆಗೆ ಹಿಂತಿರುಗಿದ್ದಾನೆ. ಮನೆಗೆ ಬಂದ ಬಳಿಕ ಮನೆ ಸಮೀಪದ ಪೇರಳೆ ಹಣ್ಣು ಕೊಯ್ಯಲು ಮರಕ್ಕೆ ಹತ್ತಿದ್ದು ಈ ವೇಳೆ ಅಯತಪ್ಪಿ ಕೆಳಕ್ಕೆ ಉರುಳಿದಾಗ ಕೆನ್ನಿ ಭಾಗಕ್ಕೆ ಏಟಾಗಿ ಮೃತಪಟ್ಟಿದ್ದಾನೆ.
ಸದ್ಯ ಬಾಲಕನ ಮೃತದೇಹದ ಮರಣೋತ್ತರ ಪರೀಕ್ಷೆಯು ಕಡಬ ಸರಕಾರಿ ಆಸ್ಪತ್ರೆಯಲ್ಲಿ ನಡೆಸಲಾಗುತ್ತಿದೆ.
ಮೃತ ಉಲ್ಲಾಸ್ ತಂದೆ ದಿವಾಕರ್, ತಾಯಿ ಹಾಗೂ ಸಹೋದರನನ್ನು ಅಗಲಿದ್ದಾರೆ.