ಎಸ್.ಎಸ್.ಎಲ್.ಸಿ ಪರೀಕ್ಷಾರ್ಥಿಗಳಿಗೆ ಸಿಹಿ ಸುದ್ದಿ!! ಎಕ್ಸಾಮ್ ಮುಗಿಯುವ ವರೆಗೆ ನಿಮಗಾಗಿ ಸಂಚರಿಸಲಿದೆ ವಿಶೇಷ ಕರ್ನಾಟಕ ಸಾರಿಗೆ!!

ರಾಜ್ಯಾದ್ಯಂತ ಮಾರ್ಚ್ 28 ರಿಂದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ಆರಂಭವಾಗುವ ಹಿನ್ನೆಲೆಯಲ್ಲಿ ರಾಜ್ಯಾ ರಸ್ತೆ ಸಾರಿಗೆ ನಿಗಮವು ಸಿಹಿ ಸುದ್ದಿಯೊಂದನ್ನು ನೀಡಿದೆ.

ಶಾಲಾ ವಿದ್ಯಾರ್ಥಿಗಳ ಬಸ್ ಪಾಸ್ ನಲ್ಲಿ ಮಾರ್ಚ್ 31 ಕೊನೆಯ ದಿನವಾಗಿದ್ದು, ಆ ಬಳಿಕ ಟಿಕೆಟ್ ಪಡೆದು ಹೋಗಬೇಕಾಗಿದೆ. ಆದರೆ ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಕಳೆದ ಕೆಲ ವರ್ಷಗಳ ಹಾಗೆಯೇ ಈ ಬಾರಿಯೂ ಪರೀಕ್ಷೆ ಮುಗಿಯುವ ವರೆಗೆ ಕೆ.ಎಸ್.ಆರ್.ಟಿ.ಸಿ ಹಾಗೂ ಬಿ.ಎಂ.ಟಿ.ಸಿ ಬಸ್ಸುಗಳಲ್ಲಿ ಹಾಲ್ ಟಿಕೆಟ್ ತೋರಿಸಿ ಪ್ರಯಾಣಿಸಬಹುದಾಗಿದೆ ಎಂದು ನಿಗಮವು ಆದೇಶ ಹೊರಡಿಸಿದೆ.

ಮಾರ್ಚ್ 28 ರಿಂದ ಏಪ್ರಿಲ್ 11 ರ ವರೆಗೆ ವಿದ್ಯಾರ್ಥಿಗಳಿಗೆ ಈ ಸೌಲಭ್ಯ ದೊರೆಯಲಿದ್ದು, ವಿದ್ಯಾರ್ಥಿಗಳು ಯಾವುದೇ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ತಿಳಿಸಿದೆ.

Leave A Reply

Your email address will not be published.