ವಿಟ್ಲ : ನೇಣು ಬಿಗಿದು ಯುವಕ ಆತ್ಮಹತ್ಯೆ

ವಿಟ್ಲ: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದ ಉಜಿರೆಮಾರ್ ನಲ್ಲಿ ನಡೆದಿದೆ.

ಮೃತರನ್ನು ವಿಟ್ಲದ ಉಜಿರೆಮಾರ್ ನಿವಾಸಿ ಬಾಲಕೃಷ್ಣ ನಾಯ್ಕ ಎಂಬವರ ಪುತ್ರ ದೀಪಕ್ (21) ಎಂದು ಗುರುತಿಸಲಾಗಿದೆ.

ದೀಪಕ್ ವೃತ್ತಿಯಲ್ಲಿ ಮೇಸ್ತ್ರಿ ಕೆಲಸ ನಿರ್ವಹಿಸುತ್ತಿದ್ದು ಆತ್ಮಹತ್ಯೆಗೆ ಕಾರಣ ಇನ್ನಷ್ಟೇ ತಿಳಿಯಬೇಕಿದೆ.

ಮೃತರು ತಂದೆ ,ತಾಯಿ ತಂಗಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Leave A Reply

Your email address will not be published.