ಕುಂದಾಪುರ : ತಂದೆಯನ್ನೇ ಕೊಡಲಿಯಿಂದ ಕೊಚ್ಚಿ ಕೊಂದ ಮಗ | ಕೌಟುಂಬಿಕ ದ್ವೇಷ ಹಿನ್ನೆಲೆಯಲ್ಲಿ ಭೀಕರ ಹತ್ಯೆ

ಕುಂದಾಪುರ : ಕೋಟೇಶ್ವರ ಸಮೀಪದ ಗೋಪಾಡಿಯಲ್ಲಿ ಮಗನೇ ತಂದೆಯನ್ನು ಹತ್ಯೆಗೈದಿರುವ ಘಟನೆಯೊಂದು ಶನಿವಾರ ತಡರಾತ್ರಿ ನಡೆದಿದೆ.

ಗೋಪಾಡಿ ಗ್ರಾಮದ ಹಾಲಾಡಿ ಮನೆ ನಿವಾಸಿ ನರಸಿಂಹ ಮರಕಾಲ ( 74) ಕೊಲೆಯಾದ ವ್ಯಕ್ತಿ. ಆರೋಪಿ ಮಗನನ್ನು ರಾಘವೇಂದ್ರ ( 36) ಎಂದು ಗುರುತಿಸಲಾಗಿದೆ.

ಕೌಟುಂಬಿಕ ದ್ವೇಷದ ಕಾರಣದಿಂದಾಗಿ ಮಗ ತಂದೆಯನ್ನೇ ಸಣ್ಣ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಕುಂದಾಪುರ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

Leave A Reply

Your email address will not be published.