ಕಾಪು: ಗುಜರಿ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ!! ಇಬ್ಬರು ಸ್ಥಳದಲ್ಲೇ ಮೃತ್ಯು-ಓರ್ವ ಗಂಭೀರ

ಗುಜರಿ ಅಂಗಡಿಯಲ್ಲಿಟ್ಟಿದ್ದ ಗ್ಯಾಸ್ ಸಿಲಿಂಡರ್ ಒಂದು ಸ್ಫೋಟಗೊಂಡು ಇಬ್ಬರು ಮೃತಪಟ್ಟ ಘಟನೆ ಮಾರ್ಚ್ 21 ರ ಮುಂಜಾನೆ ಉಡುಪಿ ಜಿಲ್ಲೆಯ ಕಾಪು ತಾಲೂಕಿನಲ್ಲಿ ನಡೆದಿದೆ.

ತಾಲೂಕಿನ ಫಕೀರ್ನಕಟ್ಟೆ ಎಂಬಲ್ಲಿಯ ಗುಜರಿ ಅಂಗಡಿಯಲ್ಲಿ ಈ ಘಟನೆ ನಡೆದಿದ್ದು,ಸ್ಫೋಟದ ತೀವ್ರತೆಗೆ ಇಬ್ಬರು ಮೃತಪಟ್ಟರೆ ಓರ್ವ ಗಂಭೀರ ಗಾಯಗೊಂಡಿದ್ದಾನೆ ಎನ್ನಲಾಗಿದೆ.

ಮೃತರನ್ನು ರಜಾಕ್ ಮುಲ್ಲರ್ ಹಾಗೂ ರಜಬ್ ಚಂದ್ರನಗರ ಎಂದು ಗುರುತಿಸಲಾಗಿದ್ದು,ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Leave A Reply

Your email address will not be published.