ಮಾಜಿ ಸಿಎಂ ಸಿದ್ದರಾಮಯ್ಯನವರಿಂದ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಕುರಿತಂತೆ ಮಹತ್ವದ ಹೇಳಿಕೆ !

ಚುನಾವಣಾ ರಾಜಕೀಯ ನಿವೃತ್ತಿ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮಹತ್ವದ ಹೇಳಿಕೆಯೊಂದನ್ನು ನೀಡಿದ್ದಾರೆ. ‘ಮುಂದಿನ ಚುನಾವಣೆಯೇ ಕೊನೆಯ ಚುನಾವಣೆ. ಮತ್ತೆ ಚುನಾವಣಾ ರಾಜಕಾರಣ ಮಾಡಲ್ಲ ‘ ಎಂದು ಮೈಸೂರಿನಲ್ಲಿ ಹೇಳಿದ್ದಾರೆ.

ಐದು ಬಾರಿ ಚಾಮುಂಡೇಶ್ವರಿ ಜನ ನನ್ನನ್ನು ಗೆಲ್ಲಿಸಿ ಹರಸಿದ್ದಾರೆ. ಅದಕ್ಕಾಗಿ ಚಾಮುಂಡೇಶ್ವರಿಯನ್ನು ನಾನು ಮರೆಯೊಲ್ಲ. ಮುಂದಿನ ಚುನಾವಣೆಯೇ ಕೊನೆ. ಆದರೆ ಸಕ್ರಿಯ ಚುನಾವಣಾ ರಾಜಕೀಯದಲ್ಲಿ ಇರುತ್ತೇನೆ ಎಂದು ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದ್ದಾರೆ.

ಚಾಮುಂಡೇಶ್ವರಿ, ಹುಣಸೂರು, ಹೆಬ್ಬಾಳ, ಚಾಮರಾಜಪೇಟೆ, ಬಾದಾಮಿ, ಕೋಲಾರ ಇಷ್ಟು ಕ್ಷೇತ್ರದ ಜನ ಇಲ್ಲಿ ಸ್ಪರ್ಧಿಸುವಂತೆ ನನ್ನಲ್ಲಿ ಕೇಳುತ್ತಿದ್ದಾರೆ. ನಾನು ಯಾವ ಕ್ಷೇತ್ರದಲ್ಲಿ ಸ್ಪರ್ಧಿಸಬೇಕು ತೀರ್ಮಾನ ಮಾಡಿಲ್ಲ. ಚುನಾವಣೆಗೆ ಇನ್ನೂ ಒಂದು ವರ್ಷ ಬಾಕಿ ಇದೆ. ಮುಂದೆ ಸೂಕ್ತ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಹೇಳಿದ್ದಾರೆ.

Leave A Reply

Your email address will not be published.