ಮುಂದಿನ ಶೈಕ್ಷಣಿಕ ವರ್ಷದಿಂದಲೇ ಪರಿಷ್ಕೃತ ಪಠ್ಯ ಪುಸ್ತಕ ವಿತರಣೆ : ರಾಜ್ಯ ಸರ್ಕಾರದಿಂದ ಆದೇಶ

ಬೆಂಗಳೂರು ರಾಜ್ಯದಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದಲೇ ಪರಿಷ್ಕೃತ ಪಠ್ಯ ಪುಸ್ತಕ ವಿತರಣೆ ಮಾಡುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಸಮಿತಿಯು 1 ರಿಂದ 10 ನೇ ತರಗತಿವರೆಗಿನ ಭಾಷಾ ವಿಷಯಗಳು, 2 ಮತ್ತು 4 ನೇ ತರಗತಿಗಳ ಪರಿಸರ ಅಧ್ಯಯನ ಹಾಗೂ 6 ರಿಂದ 10 ನೇ ತರಗತಿವರೆಗಿನ ಸಮಾಜ ವಿಜ್ಞಾನ ವಿಷಯದ ಪಠ್ಯ ಪುಸ್ತಕಗಳನ್ನು ಪರಿಷ್ಕರಿಸಿದೆ.

ಇನ್ನು 6 ರಿಂದ 8 ನೇ ತರಗತಿವರೆಗಿನ ಸಮಾಜ ವಿಜ್ಞಾನದ 7 ಮಾಧ್ಯಮದ 68 ಪರಿಷ್ಕೃತ ಪಠ್ಯ ಪುಸ್ತಕಗಳು ಹಾಗೂ 1 ರಿಂದ 10 ನೇ ತರಗತಿವರೆಗಿನ ಕನ್ನಡ ಭಾಷಾ ವಿಷಯದ 15 ಪರಿಷ್ಕೃತ ಪುಸ್ತಕಗಳನ್ನು ಮುದ್ರಿಸಿ ವಿತರಿಸಲಾಗುತ್ತಿದೆ.

Leave A Reply

Your email address will not be published.