ಸಾರ್ವಜನಿಕ ಸ್ಥಳದಲ್ಲಿ ಜುಗಾರಿ ಉಲಾಯಿ-ಪಿದಾಯಿ -5 ಉಲಾಯಿ

ವಿಟ್ಲ: ಕೇಪು ಗ್ರಾಮದ ಕುದ್ದುಪದವಿನಲ್ಲಿ ಕಾನೂನು ಬಾಹಿರವಾಗಿ ಇಸ್ಪಿಟ್ ಎಲೆಗಳಿಂದ ಉಲಾಯಿ-ಪಿದಾಯಿ ಜುಗಾರಿ ಅಡುತ್ತಿದ್ದ ಐವರನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.

ಈ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ ಐವರನ್ನು ವಶಕ್ಕೆ ಪಡೆದಿದ್ದಾರೆ.

ಬಂಧಿತ ಆರೋಪಿಗಳನ್ನು ಕೆ ಪಿ ಹನೀಫ್, ಅಬೂಬಕ್ಕರ್ ಸಿದ್ದೀಕ್, ಸಿರಾಜುದ್ದೀನ್, ಮುನೀರ್ ಕೆ. ಎಂ, ಮಹಮ್ಮದ್ ಇಬ್ರಾಹಿಂ ಎನ್ನಲಾಗಿದೆ.

ಇವರಿಂದ ಜುಗಾರಿ ಆಟಕ್ಕೆ ಉಪಯೋಗಿಸಿದ ಒಟ್ಟು ಹಣ 5150/-ರೂ ಹಾಗೂ ಆಟಕ್ಕೆ ಬಳಸಿದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

Leave A Reply

Your email address will not be published.