ಕಡಬ ಠಾಣೆಯ ಪೊಲೀಸ್ ಅಧಿಕಾರಿ ಎಸ್.ಐ.ರುಕ್ಮ ನಾಯ್ಕ್ ಬೆಳ್ಳಾರೆಗೆ ವರ್ಗಾವಣೆ!

ಕಡಬ ಠಾಣೆಯ ಠಾಣಾಧಿಕಾರಿ ಎಸ್.ಐ ರುಕ್ಮನಾಯ್ಕ್ ಬೆಳ್ಳಾರೆ ಠಾಣೆಗೆ ವರ್ಗಾವಣೆಗೊಂಡಿದ್ದಾರೆ. ಬೆಳ್ಳಾರೆ ಠಾಣೆ ಎಸ್.ಐ ಆಂಜನೇಯ ರೆಡ್ಡಿ ಕಡಬ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಲಿದ್ದಾರೆ.

ಪಶ್ಚಿಮ ವಲಯ ಐಜಿಪಿ ಕಛೇರಿ ಈ ಆದೇಶ ಹೊರಡಿಸಿದೆ. ಕಳೆದೆರಡು ವರ್ಷಗಳಿಂದ ಕಡಬ ಠಾಣಾ ಸಬ್ ಇನ್ಸ್ಪೆಕ್ಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ರುಕ್ಮನಾಯ್ಕ್ ಅಕ್ರಮ ಚಟುವಟಿಕೆಗಳನ್ನು ನಿಯಂತ್ರಿಸುವಲ್ಲಿ ಸಫಲರಾಗಿದ್ದರು. ಅಲ್ಲದೆ ನಾಪತ್ತೆ ಪ್ರಕರಣಗಳನ್ನು ತ್ವರಿತವಾಗಿ ಪತ್ತೆಹಚ್ಚಿ, ಠಾಣೆಯ ಅಭಿವೃದ್ಧಿಗೆ ಶ್ರಮಿಸಿದ್ದರು. ಹಾಗೂ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದರು.

Leave A Reply

Your email address will not be published.