ಮಂಗಳೂರು : ಉದ್ಘಾಟನಾ ಸಮಾರಂಭಕ್ಕೆ ಕಲ್ಲಡ್ಕ ಪ್ರಭಾಕರ್ ಭಟ್ ಸಮಾರಂಭಕ್ಕೆ ಬರುವುದನ್ನು ಆಕ್ಷೇಪಿಸಿ ಕ್ಯಾಂಪಸ್ ಫ್ರಂಟ್ ಪ್ರತಿಭಟನೆ|

ಮಂಗಳೂರು : ಕ್ಯಾಂಪಸ್ ಫ್ರಂಟ್ ಇಂದು ಬೆಳಗ್ಗೆ ವಿವಿಯ ಮುಖ್ಯ ದ್ವಾರದ ಬಳಿ ಸ್ನಾತಕೋತ್ತರ ವಿದ್ಯಾರ್ಥಿ ಪರಿಷತ್ತು ಉದ್ಘಾಟನಾ ಸಮಾರಂಭಕ್ಕೆ ಕಲ್ಲಡ್ಕ ಪ್ರಭಾಕರ್ ಭಟ್ ಅತಿಥಿಯಾಗಿ ಆಗಮಿಸುವುದನ್ನು ವಿರೋಧಿಸಿ ಪ್ರತಿಭಟನೆ ಮಾಡಿದೆ.

ಈ ಸಂದರ್ಭದಲ್ಲಿ ವಿವಿಯ ಒಳಗೆ ನುಗ್ಗಲು ಯತ್ನಿಸಿದಾಗ ಪೊಲೀಸರು ಹಾಗೂ ತಳ್ಳಾಟಕಾರರ ಮಧ್ಯೆ ನೂಕಾಟವಾಯಿತು. ಹಾಗಾಗಿ ವಿದ್ಯಾರ್ಥಿ ನಾಯಕರನ್ನು ಬಂಧಿಸಲಾಗಿದೆ.

ಈ ಕಾರ್ಯಕ್ರಮಕ್ಕೆ ಪ್ರಭಾಕರ್ ಭಟ್ ಆಗಮಿಸುತ್ತಾರೆ ಎಂಬ ಬಗ್ಗೆ ವಿರೋಧ ವ್ಯಕ್ತವಾಗಿದ್ದವು.

ಕ್ರಿಮಿನಲ್ ಹಿನ್ನೆಲೆಯ ಹಾಗೂ ವಿದ್ಯಾರ್ಥಿಗಳ ಮಧ್ಯೆ ಕೋಮುಪ್ರಚೋದನೆ ಭಾಷಣವನ್ನು ಮಾಡುವ ವ್ಯಕ್ತಿಯನ್ನು ಕರೆದಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

Leave A Reply

Your email address will not be published.