ಸುಳ್ಯ: ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಕನ್ನ ಹಾಕಿದ ಕಳ್ಳರು !! | ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಕಳವು

Share the Article

ಇತ್ತೀಚೆಗೆ ಸುಳ್ಯದ ಮನೆಯೊಂದರಲ್ಲಿ ನಡೆದ ದರೋಡೆ ಪ್ರಕರಣ ಮಾಸುವ ಮುನ್ನವೇ ಇದೀಗ ಕೃಷಿ ಪತ್ತಿನ ಸಹಕಾರಿ ಸಂಘದ ಹೊಸ ಕಟ್ಟಡಕ್ಕೆ ಕನ್ನ ಹಾಕಿ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳನ್ನು ಕಳವು ಮಾಡಿರುವ ಘಟನೆ ಮುರುಳ್ಯ-ಎಣ್ಣೂರು ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ನಡೆದಿದೆ.

ಅಲೆಕ್ಕಾಡಿಯಲ್ಲಿರುವ ಮುರುಳ್ಯ-ಎಣ್ಣೂರು ಕೃಷಿ ಪತ್ತಿನ ಸಹಕಾರಿ ಸಂಘ ಕಟ್ಟಡದಲ್ಲಿರುವ 2 ಮಾನಿಟರ್, 1 ಕಂಪ್ಯೂಟರ್ ಸೇರಿದಂತೆ ಎಲ್ ಇಡಿ ಸ್ಮಾರ್ಟ್ ಟಿವಿಗಳು ಸೇರಿದಂತೆ 1.52 ಲಕ್ಷದ ರೂಪಾಯಿ ಮೌಲ್ಯದ ವಸ್ತುಗಳನ್ನು ಕಳುವು ಮಾಡಲಾಗಿದೆ. ಮಾರ್ಚ್ 18 ರಿಂದ ಮಾರ್ಚ್ 30ರೊಳಗೆ ಕಳ್ಳತನ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ನಿನ್ನೆ ಈ ಘಟನೆ ಬೆಳಕಿಗೆ ಬಂದಿದೆ.

ಅಲೆಕ್ಕಾಡಿ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈ ಬಗ್ಗೆ ದೂರು ನೀಡಿದ್ದು, ಬೆಳ್ಳಾರೆ ಠಾಣೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Leave A Reply

Your email address will not be published.