ನಿವೃತ್ತ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ನಾಳೆ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆ !

ನಿವೃತ್ತ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ಸೋಮವಾರ (ಏಪ್ರಿಲ್ 4) ಬೆಳಗ್ಗೆ 11 ಗಂಟೆಗೆ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ. ಭಾಸ್ಕರ್ ರಾವ್ ಆಮ್ ಆದ್ಮಿ ಪಕ್ಷಕ್ಕೆ ಸೇರಲಿರುವ ಬಗ್ಗೆ ಮಾಹಿತಿ ಲಭಿಸಿದೆ. ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಸಮ್ಮುಖದಲ್ಲಿ ಆಪ್‌ಗೆ ಸೇರ್ಪಡೆ ಆಗಲಿದ್ದಾರೆ. ಆಪ್ ಸೇರ್ಪಡೆ ಬಳಿಕ ಭಾಸ್ಕರ್ ರಾವ್ ಸುದ್ದಿಗೋಷ್ಠಿ ನಡೆಸಲಿದ್ದು, ನಾಳೆ ಮಧ್ಯಾಹ್ನ 1 ಗಂಟೆಗೆ ಭಾಸ್ಕರ್ ರಾವ್ ಸುದ್ದಿಗೋಷ್ಠಿ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

Leave A Reply

Your email address will not be published.