ಹನುಮನ ಜನ್ಮಸ್ಥಳ ಅಂಜನಾದ್ರಿ ಬೆಟ್ಟ ಅಭಿವೃದ್ಧಿಗೆ 100 ಕೋಟಿ ರೂ. ಅನುದಾನ ಬಿಡುಗಡೆ | ಸಿಎಂ ಬಸವರಾಜ ಬೊಮ್ಮಾಯಿ!!!

ಬೆಂಗಳೂರು: ಹಂಪಿ ಬಳಿಯ ಹನುಮನ ಜನ್ಮಸ್ಥಳವಾದ
ಅಂಜನಾದ್ರಿ ಕ್ಷೇತ್ರವನ್ನು ಅಭಿವೃದ್ಧಿಪಡಿಸಲು 100 ಕೋಟಿ ರೂ. ಅನುದಾನವನ್ನು ಬಜೆಟ್‌ನಲ್ಲಿ ಒದಗಿಸಲಾಗಿದೆ. ಇದೇ ವರ್ಷ ಈ ಯೋಜನೆಯನ್ನು ಸಿದ್ಧಪಡಿಸಿ ಅಭಿವೃದ್ಧಿ ಕಾಮಗಾರಿ ಆರಂಭಿಸಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಚಾಮರಾಜಪೇಟೆಯ ಕೋಟೆ ಮೈದಾನದಲ್ಲಿ ಶ್ರೀರಾಮ ಸೇವಾ ಮಂಡಳಿ ಆಯೋಜಿಸಿದಂತಹ 84 ನೇ ಶ್ರೀ ರಾಮನವಮಿ ಸಂಗೀತೋತ್ಸವ ಕಾರ್ಯಕ್ರಮವನ್ನು ಶನಿವಾರ ಉದ್ಘಾಟಿಸಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ಅವರು ‘ಅಂಜನಾದ್ರಿ ಬೆಟ್ಟವನ್ನು ವಿಶಿಷ್ಟ ರೀತಿಯಲ್ಲಿ ಅಭಿವೃದ್ಧಿಪಡಿಸಲಾಗುವುದು’ ಎಂದರು.

Leave A Reply

Your email address will not be published.