ಆರ್.ಎಸ್.ಎಸ್ ಹಿರಿಯ ಮುಖಂಡ ಡಾ.ಕಲ್ಲಡ್ಕ ಪ್ರಭಾಕರ್ ಭಟ್ ಆರೋಗ್ಯದಲ್ಲಿ ಏರುಪೇರು!! ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮುಂದುವರಿದ ಚಿಕಿತ್ಸೆ

ಮಂಗಳೂರು:ಆರ್ ಎಸ್ ಎಸ್ ಹಿರಿಯ ಮುಖಂಡ, ಹಿಂದೂ ಕಾರ್ಯಕರ್ತರ ಪಾಲಿನ ಗುರು ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಆರೋಗ್ಯದಲ್ಲಿ ಏರು ಪೇರಾದ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.

ಪ್ರಭಾಕರ್ ಭಟ್ ಅವರಿಗೆ ರಕ್ತದೊತ್ತಡ ಕಡಿಮೆಯಾದ ಹಿನ್ನೆಲೆಯಲ್ಲಿ ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಾಗಿದ್ದು, ಸದ್ಯ ಚಿಕಿತ್ಸೆಗೆ ಸ್ಪಂದಿಸಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವೈದ್ಯ ಮೂಲಗಳು ತಿಳಿಸಿವೆ.

ಕಲ್ಲಡ್ಕ ಪ್ರಭಾಕರ ಭಟ್ ಅವರು ತಮ್ಮ ಶ್ರೀರಾಮ ಶಾಲೆಯ ವಿದ್ಯಾರ್ಥಿಗಳೊಂದಿಗೆ ಸಂವಾದದಲ್ಲಿ ತೊಡಗಿಕೊಂಡಿದ್ದಾರೆ ಏಕಾಏಕಿ ಅವರ ಆರೋಗ್ಯ ಕ್ಷೀನಿಸಿತ್ತು. ಅವರ ರಕ್ತದೊತ್ತಡ ದಿಡೀರ್ ಕುಗ್ಗಿ ಲೋ ಬಿಪಿ ಆಗಿತ್ತು. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.

ಭಟ್ಟರ ಆರೋಗ್ಯ ಸುದ್ದಿ ಹರಡುತ್ತಿದ್ದಂತೆ ಹಿಂದೂ ಸಂಘಟನೆಗಳ ಜನರಲ್ಲಿ ಆತಂಕ ಸೃಷ್ಟಿಯಾಗಿದೆ. ಇದೀಗ ಅವರ ಆರೋಗ್ಯ ಸ್ಥಿರವಾಗಿದ್ದು, ವೈದ್ಯರ ಮುಂದಿನ ಹೇಳಿಕೆಗೆ ಕಾಯಲಾಗಿದೆ.

Leave A Reply

Your email address will not be published.