ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ವ್ಯಕ್ತಿ ಸಾವು!

ಬ್ರಹ್ಮಾವರ :ಆಕಸ್ಮಿಕವಾಗಿ ಕಾಲು ಜಾರಿ ವ್ಯಕ್ತಿಯೊಬ್ಬರು
ಬಾವಿಗೆ ಬಿದ್ದು ಮೃತಪಟ್ಟ ಘಟನೆ ಯಡ್ತಾಡಿ ಗ್ರಾಮದ ಸಾಯಿಬ್ರಕಟ್ಟೆ ಎಂಬಲ್ಲಿ ನಡೆದಿದೆ.

ಮೃತರನ್ನು ಶುಕ್ರ ಪೂಜಾರಿ(65) ಎಂದು ಗುರುತಿಸಲಾಗಿದೆ.

ಮೃತರಾದ ಶುಕ್ರ ಪೂಜಾರಿಯವರು ಕೂಲಿ ಕೆಲಸ ಮಾಡಿಕೊಂಡಿದ್ದರು.ಗೋಪಾಲಕೃಷ್ಣ ಸೋಮಯಾಜಿ ಎಂಬುವರ ತೋಟದ ಬಾವಿಯಲ್ಲಿರುವ ಒಣಗಿದ ಮಡಲುಗಳನ್ನು ತೆಗೆಯಲು ಹೋಗಿ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು,ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave A Reply

Your email address will not be published.