ಶ್ರೀರಾಮ ಮೆರವಣಿಗೆ ವೇಳೆ ಕಲ್ಲುತೂರಾಟ ನಡೆಸಿದ ದುಷ್ಕರ್ಮಿಗಳು | ಪೊಲೀಸರಿಂದ ಲಾಠಿ ಪ್ರಹಾರ

ದುಷ್ಕರ್ಮಿಗಳು ಶ್ರೀರಾಮ ಶೋಭಯಾತ್ರೆ ವೇಳೆ ಕಲ್ಲುತೂರಾಟ ನಡೆಸಿದ್ದು, ಇದರಿಂದ ಕೆಲ ಕಾಲ ಉದ್ವಿಗ್ನ ಪರಿಸ್ಥಿತಿ ಉಂಟಾಯಿತು.

ಕೋಲಾರ ಜಿಲ್ಲೆಯ ಮುಳಬಾಗಿಲಿನಲ್ಲಿ ಈ ಅಹಿತಕರ ಘಟನೆ ನಡೆದಿದೆ.
ಮುಳಬಾಗಿಲಿನಿಂದ ಅವನಿ ಕಡೆಗೆ ಶ್ರೀರಾಮ ಶೋಭಾಯಾತ್ರೆ ಮೆರವಣಿಗೆ ಹೋಗುತ್ತಿದ್ದಾಗ ಜಹಂಗೀರ್ ಮೊಹಲ್ಲಾದ ಬಳಿ ಈ ಘಟನೆ ನಡೆದಿದ್ದು, ಇದರಿಂದ ಆಕ್ರೋಶಗೊಂಡ ಒಂದು ಕೋಮಿನ ಜನರು ಬೈಕ್ ಗೆ ಬೆಂಕಿ ಹಚ್ಚಿದ್ದಾರೆ.

ಪರಿಸ್ಥಿತಿ ವಿಕೋಪಕ್ಕೆ ತಿರುಗುವ ಹಂತದಲ್ಲಿ ಪೊಲೀಸರು ಲಾಠಿ ಪ್ರಹಾರ ನಡೆಸಿ ಗುಂಪನ್ನು ಚದುರಿಸಿದ್ದಾರೆ. ಈ ಮೂಲಕ ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ.

Leave A Reply

Your email address will not be published.