ಬೆಳ್ಮಣ್ : ಟೆಂಪೋ – ಸ್ಕೂಟರ್ ಮುಖಾಮುಖಿ ಡಿಕ್ಕಿ : ಸವಾರ ಸಾವು!

ಬೆಳ್ಮಣ್ : ಕಾರ್ಕಳ ತಾಲೂಕಿನ ಮುಂಡೂರು ಗ್ರಾಮದ ಜಾರಿಗೆಕಟ್ಟೆ ಎಂಬಲ್ಲಿ ಶನಿವಾರ ರಾತ್ರಿ ಟೆಂಪೋ ಮತ್ತು ಸ್ಕೂಟರ್ ಮುಖಾಮುಖಿಯಾಗಿ ಡಿಕ್ಕಿಯಾದ ಪರಿಣಾಮ ಸ್ಕೂಟರ್ ಸವಾರ ಸಾವನ್ನಪ್ಪಿದ ಘಟನೆಯೊಂದು ನಡೆದಿದೆ.

ಸ್ಕೂಟರ್ ಸವಾರ ಸಚೇರಿಪೇಟೆಯ ನಿವಾಸಿ ಗೋಪಾಲಕೃಷ್ಣ (38) ಮೃತಪಟ್ಟ ವ್ಯಕ್ತಿ.

ಶನಿವಾರ ರಾತ್ರಿ 10 ಗಂಟೆಯ ಸುಮಾರಿಗೆ ಮುಂಡೂರು ಕಡೆಯಿಂದ ಮೂಡಬಿದ್ರೆಗೆ ತೆರಳುತ್ತಿದ್ದ ತರಕಾರಿ ಸಾಗಾಟದ ಟೆಂಪೊವೊಂದು, ವಿರುದ್ಧ ದಿಕ್ಕಿನಲ್ಲಿ ಬಂದ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದ್ದು, ಸವಾರ ಗೋಪಾಲಕೃಷ್ಣ ರಸ್ತೆಗೆ ಎಸೆಯಲ್ಪಟ್ಟಿದ್ದರು. ಗಂಭೀರ ಗಾಯಗೊಂಡ ಅವರನ್ನು ಕಿನ್ನಿಗೋಳಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ವೈದ್ಯರು ಪರೀಕ್ಷಿಸಿದಾಗ ಅವರು ಮೃತಪಟ್ಟಿರುವುದಾಗಿ ತಿಳಿದು ಬಂದಿತ್ತು.

ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave A Reply

Your email address will not be published.