ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆಯೇ ಹೆಡ್ ಕಾನ್ಸ್ಟೇಬಲ್ ಸಾವು !!

ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಹೆಡ್‌ ಕಾನ್ಸ್ಟೇಬಲ್‌ ಒಬ್ಬರು ಠಾಣೆಯಲ್ಲಿಯೇ ಸಾವನ್ನಪ್ಪಿರುವ ದಾರುಣ ‌ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಪೊಲೀಸ್ ಠಾಣೆಯಲ್ಲಿ ನಡೆದಿದೆ.

ಮೃತರನ್ನು ಪರಮೇಶ್ವರಪ್ಪ (51) ಎಂದು ಗುರುತಿಸಲಾಗಿದೆ.

ಬಣಕಲ್ ಪೊಲೀಸ್ ಠಾಣೆಯಲ್ಲಿ ಹೆಡ್‌ ಕಾನ್ಸ್ಟೇಬಲ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪರಮೇಶ್ವರಪ್ಪ ಠಾಣೆಯಲ್ಲಿಯೇ ಅಸ್ವಸ್ಥರಾಗಿದ್ದರು. ಹಾಗಾಗಿ ಠಾಣೆಯಲ್ಲಿದ್ದ ಸಿಬ್ಬಂದಿ ಕೂಡಲೇ ಅವರನ್ನು ಮೂಡಿಗೆರೆ ಪಟ್ಟಣದ ಎಂ.ಜಿ.ಎಂ. ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ದಿದ್ದಾರೆ. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಾಕಾರಿಯಾಗದೇ ಪರಮೇಶ್ವರಪ್ಪ ಕೊನೆಯುಸಿರೆಳೆದಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಕೆ.ಬಿ.ಪರಮೇಶ್ವರಪ್ಪ ಮೂಲತಃ ಚಿಕ್ಕಮಗಳೂರು ತಾಲೂಕಿನ ಲಕ್ಯಾ ಹೋಬಳಿ ಕಣಿವೆಹಳ್ಳಿ ಮೂಲದವರಾಗಿದ್ದು, ಕಳೆದ ಐದು ವರ್ಷಗಳಿಂದ ಬಣಕಲ್ ಪೊಲೀಸ್ ಠಾಣೆಯಲ್ಲಿ ಹೆಡ್‌ ಕಾನ್ಸ್‌ಟೇಬಲ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಕೆ.ಬಿ. ಪರಮೇಶ್ವರಪ್ಪ ಅವರನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಕಣಿವೆಹಳ್ಳಿಯ ಅವರ ಖಾಸಗಿ ಜಮೀನಿನಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಯಿತು.

Leave A Reply

Your email address will not be published.