ಸವಣೂರು : ಹಿಂದು ಜಾಗರಣ ವೇದಿಕೆಯ ವಾರ್ಷಿಕ ಸತ್ಯನಾರಾಯಣ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

ಸವಣೂರು :ಸವಣೂರು ಹಿಂದು ಜಾಗರಣ ವೇದಿಕೆಯ ವಾರ್ಷಿಕ ಸತ್ಯನಾರಾಯಣ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಸವಣೂರು ಬಸದಿಯ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ನಡೆಸಲಾಯಿತು. ದೇವಿಗೆ ಹೂವಿನ ಪೂಜೆ ನಡೆಸಿ ನಂತರ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು.

ಈ ಸಂದರ್ಭದಲ್ಲಿ ಪುತ್ತೂರು ಎ.ಪಿ.ಯಂ.ಸಿ. ಅಧ್ಯಕ್ಷ ದಿನೇಶ್ ಮೆದು, ಹಿಂದು ಜಾಗರಣ ವೇದಿಕೆ ಸವಣೂರು ಘಟಕ ಇದರ ಅಧ್ಯಕ್ಷ ಶ್ರೀಧರ ಇಡ್ಯಾಡಿ, ಗೌರವಾಧ್ಯಕ್ಷ ಗಿರಿಶಂಕರ ಸುಲಾಯ, ಪುತ್ತೂರು ತಾಲೂಕು ಗೌರವಾಧ್ಯಕ್ಷರಾದ ಪ್ರಕಾಶ್ಚಂದ್ರ ರೈ ಮುಗೇರು ಗುತ್ತು, ವಕೀಲರಾದ ಮಹೇಶ್ ಕೆ. ಸವಣೂರು, ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಸತೀಶ್ ಬಲ್ಯಾಯ, ಹಿಂದು ಜಾಗರಣ ವೇದಿಕೆ ತಾಲೂಕು ಕಾರ್ಯದರ್ಶಿ ಪುಷ್ಪರಾಜ್ ಸವಣೂರು, ಸವಣೂರು ಯುವಕ ಮಂಡಲದ ಮಾಜಿ ಅಧ್ಯಕ್ಷರಾದ ಗಂಗಾಧರ ಪೆರಿಯಡ್ಕ, ಸವಣೂರು ಯುವಕ ಮಂಡಲದ ಮಾಜಿ ಅಧ್ಯಕ್ಷರಾದ ಸಚಿನ್ ಸವಣೂರು, ಹಿಂದು ಜಾಗರಣ ವೇದಿಕೆ ಪ್ರಚಾರ ಪ್ರಮುಖ್ ರಾಜೇಶ್ ಇಡ್ಯಾಡಿ, ಅಕ್ಷಯ್ ಪೂವ ಉಪಸ್ಥಿತರಿದ್ದರು.

Leave A Reply

Your email address will not be published.