ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಕೃಷಿಕ ಸಾವು!

ಉಡುಪಿ: ಕೃಷಿಕ ಕಾಲು ಜಾರಿ ಬಾವಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ಕೋಟಾದ ಸಾಸ್ತಾನ ಗೋಳಿಗರಡಿ ಗ್ರಾಮದಲ್ಲಿ ನಡೆದಿದೆ.

ಮೃತರು ಸಾಸ್ತಾನ ಗೋಳಿಗರಡಿ ನಿವಾಸಿ ರಾಜೇಂದ್ರ ಪೂಜಾರಿ(38).

ರಾಜೇಂದ್ರ ಪೂಜಾರಿ ಕೃಷಿ ಕೆಲಸ ಮಾಡಿಕೊಂಡಿದ್ದು, ಎಂದಿನಂತೆ ಮನೆಯ ಪಕ್ಕದಲ್ಲಿರುವ ಗದ್ದೆಗೆ ನೀರು ಬಿಡಲು ಬಾವಿಯ ಬಳಿ ಹೋದಾಗ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಮೃತಪಟ್ಟಿದ್ದಾರೆ. ಈ ಸಂಬಂಧ ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave A Reply

Your email address will not be published.