ಹೋಮ್ ವರ್ಕ್ ಮಾಡದ ಮಕ್ಕಳಿಗೆ ಈ ಶಾಲೆಯಲ್ಲಿ ಹೀಗೊಂದು ವಿಶೇಷ ಶಿಕ್ಷೆ!

ಗುಜರಾತಿನ ಸೂರತ್‌ನಲ್ಲಿ ವಿಶಿಷ್ಟವಾದ ಶಾಲೆಯೊಂದಿದೆ. ಈ ಶಾಲೆಯಲ್ಲಿ ಮಕ್ಕಳು ತಪ್ಪು ಮಾಡಿದರೆ ಅವರಿಗೆ ಬೇವಿನ ರಸ ಕುಡಿಯುವ ಶಿಕ್ಷೆ ನೀಡಲಾಗುತ್ತದೆ. ಇದರ ಜೊತೆಗೆ ರಾಷ್ಟ್ರಾಭಿಮಾನವನ್ನು ಸಹ ಹೆಚ್ಚಿಸುವ ಕೆಲಸ ಮಾಡಲಾಗುತ್ತದೆ.

ಹೋಮ್ ವರ್ಕ್ ಮಾಡದ ಅಥವಾ ಇನ್ಯಾವುದೇ ತಪ್ಪುಗಳನ್ನು ಮಾಡುವ ವಿದ್ಯಾರ್ಥಿಗಳಿಗೆ ಬೇವಿನ ರಸ ನೀಡಲಾಗುತ್ತದೆ. ಈ ಶಾಲೆಯ ಪ್ರಾಂಶುಪಾಲರಾದ ಮಹೇಶ್ ಪಾಟೀಲ್ ಮಾತನಾಡಿ ಮಕ್ಕಳಲ್ಲಿ ಗಾಂಧಿ ತತ್ವವನ್ನು ಬೆಳೆಸಲು ಮತ್ತು ರಾಷ್ಟ್ರಾಭಿಮಾನ ಮೂಡಿಸುವ ಪ್ರಯತ್ನ ಮಾಡಲಾಗುತ್ತಿದೆ.

ಇದರಿಂದ ಅವರಿಗೆ ಶಿಕ್ಷೆಯನ್ನೂ ನೀಡಿದಂತಾಗುತ್ತದೆ ಮತ್ತು ಆರೋಗ್ಯವನ್ನೂ ಕಾಪಾಡಿದಂತಾಗುತ್ತದೆ’ ಎಂದರು.

Leave A Reply

Your email address will not be published.