ಮಂಗಳೂರು : ಅಪಘಾತದಲ್ಲಿ ಪತಿ ಸಾವು, ಸುದ್ದಿ ತಿಳಿದ ಪತ್ನಿಯಿಂದ 6 ತಿಂಗಳ ಮಗು ಕೊಂದು, ತಾನೂ ಆತ್ಮಹತ್ಯೆ!!!

ಮಂಗಳೂರು : ಅಗ್ನಿಶಾಮಕ ಇಲಾಖೆಯಲ್ಲಿ ಚಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವ್ಯಕ್ತಿಯೋರ್ವರು ಕುಂಟಿಕಾನ ಬಳಿ ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಪತಿ ಸಾವಿನ ಸುದ್ದಿ ತಿಳಿದು ಪತ್ನಿಯೂ ತನ್ನ 6 ತಿಂಗಳ ಪುತ್ರನನ್ನು ಕೊಂದು ಆತ್ಮಹತ್ಯೆಗೆ ಶರಣಾದ ಘಟನೆಯೊಂದು ನಡೆದಿದೆ.

ಗಂಗಾಧರ ಬಿ. ಕಮ್ಮಾರ (36 ವರ್ಷ) ಅಪಘಾತದಲ್ಲಿ ಮೃತಪಟ್ಟವರು, ಶನಿವಾರ ರಾತ್ರಿ 8.50 ಸುಮಾರಿಗೆ ಎನ್.ಎಚ್-66 ರಲ್ಲಿ ಕುಂಟಿಕಾನ ಬಳಿ ರಸ್ತೆ ದಾಟುವಾಗ ಬೆಂಗಳೂರಿಂದ ಕುಂದಾಪುರಕ್ಕೆ ಹೋಗುತ್ತಿದ್ದ ಕಾರು XUV 500 ಡಿಕ್ಕಿ ಹೊಡೆದ ಪರಿಣಾಮ ಗಂಗಾಧರ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದರು. ಈ ಬಗ್ಗೆ ಮಂಗಳೂರು ಸಂಚಾರ ಪೂರ್ವ ಠಾಣೆಯಲ್ಲಿ ಕೇಸು ದಾಖಲಾಗಿದೆ.

ಇತ್ತ ತನ್ನ ಪತಿ ಅಪಘಾತದಲ್ಲಿ ಮೃತಪಟ್ಟಿರುವ ವಿಷಯ ತಿಳಿದ ಪತ್ನಿ ಕೃತಿ (30) ಅವರು ರಾತ್ರಿ 10 ಗಂಟೆಗೆ 6 ತಿಂಗಳ ಪುತ್ರ ಅಭಿರಾಮನನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ರಾಯಚೂರು ಜಿಲ್ಲೆಯ ಲಿಂಗಸೂಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.

Leave A Reply

Your email address will not be published.