ಮಂಗಳೂರಿನಲ್ಲಿ ವಿಷಾನಿಲ ಸೋರಿಕೆ! ; ತಡರಾತ್ರಿ ನಡೆದ ದುರಂತಕ್ಕೆ ದುರ್ಮರಣ

ಮಂಗಳೂರು ಹೊರವಲಯದ ಎಸ್​ಇಝೆಡ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೀನಿನ ಫ್ಯಾಕ್ಟರಿಯ ಟ್ಯಾಂಕೊಂದರಲ್ಲಿ ವಿಷಾನಿಲ ಸೋರಿಕೆಯಾಗಿ ದುರಂತ ಸಂಭವಿಸಿದೆ.

ಹೊರವಲಯದ ಎಸ್​ಇಝೆಡ್ (ವಿಶೇಷ ಆರ್ಥಿಕ ವಲಯ) ವ್ಯಾಪ್ತಿಯಲ್ಲಿ ಭಾನುವಾರ ರಾತ್ರಿ ವಿಷಾನಿಲ ಸೋರಿಕೆಯಾಗಿ ಮೂವರು ಮೃತಪಟ್ಟಿದ್ದು, ಐವರ ಸ್ಥಿತಿ ಗಂಭೀರವಾಗಿದೆ.

ಭಾನುವಾರ ರಾತ್ರಿ ಕಾರ್ಮಿಕನೊಬ್ಬ ಮೀನಿನ ತ್ಯಾಜ್ಯದ ಟ್ಯಾಂಕನ್ನು ಶುಚಿಗೊಳಿಸಲು ಕೆಳಗಿಳಿದಿದ್ದಾನೆ. ಈ ವೇಳೆ ಏಕಾಏಕಿ ಅಸ್ವಸ್ಥಗೊಂಡು ಬಿದ್ದಿದ್ದಾನೆ. ಕೂಡಲೇ ಆತನನ್ನು ರಕ್ಷಿಸಲು 8 ಕಾರ್ಮಿಕರು ಹೋಗಿದ್ದಾರೆ. ಈ ವೇಳೆ ಅವರು ಕೂಡ ಅಸ್ವಸ್ಥಗೊಂಡು, ಉಸಿರಾಟದಲ್ಲಿ ಏರುಪೇರಾಗಿದೆ. ಅಸ್ವಸ್ಥಗೊಂಡವರನ್ನು ಕೂಡಲೇ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇವರಲ್ಲಿ ಮೂವರು ಮೃತಪಟ್ಟಿದ್ದಾರೆ. 5 ಮಂದಿ ಗಂಭೀರ ಸ್ಥಿತಿಯಲ್ಲಿದ್ದಾರೆ.

Leave A Reply

Your email address will not be published.