‘ ನಮ್ಮ ರಾಜ್ಯದ ಜನತೆಗೆ ಶ್ರೀರಾಮ ಯಾರೆಂಬುದೇ ಗೊತ್ತಿಲ್ಲ’ ವಿವಾದಾತ್ಮಕ ಹೇಳಿಕೆ ನೀಡಿದ ಕಾಂಗ್ರೆಸ್ ಸಂಸದೆ!!!

ಶ್ರೀರಾಮ ಯಾರೆಂಬುದೇ ಗೊತ್ತಿಲ್ಲ ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಕಾಂಗ್ರೆಸ್ ಸಂಸದೆಯೊಬ್ಬರು ಭಾರೀ ಟೀಕೆಗೆ ಗುರಿಯಾಗಿದ್ದಾರೆ.

‘ನಮ್ಮ ರಾಜ್ಯದ ಯಾರೊಬ್ಬರಿಗೂ ಶ್ರೀರಾಮ ಯಾರೆಂಬುದೇ ಗೊತ್ತೇ ಇಲ್ಲ’ ಎನ್ನುವ ಮೂಲಕ ತಮಿಳುನಾಡಿನ ಕಾಂಗ್ರೆಸ್ ಸಂಸದೆ ಜ್ಯೋತಿಮಣಿ ವಿವಾದಕ್ಕೆ ಗುರಿಯಾಗಿದ್ದಾರೆ.

ಮಾಧ್ಯಮವೊಂದರ ಸಂದರ್ಶನದಲ್ಲಿ ಜ್ಯೋತಿಮಣಿ ಅವರು ಈ ಹೇಳಿಕೆ ನೀಡಿದ್ದಾರೆ. ನಾನು ತಮಿಳುನಾಡು ಮೂಲದವಳು. ನನಗೆ ರಾಮ ಯಾರೆಂಬುದು ಗೊತ್ತಿಲ್ಲ. ತಮಿಳುನಾಡಿನಲ್ಲಿ ನೀವು ಯಾರನ್ನೇ ಕೇಳಿ ಅವರು ಕೂಡ ಇದೇ ಮಾತನ್ನು ಹೇಳುತ್ತಾರೆ. ನಾವು ಯಾವುದೇ ರಾಮ ದೇವಸ್ಥಾನವನ್ನು ನೋಡಿಲ್ಲ ಎಂಬ ಹೇಳಿಕೆ ನೀಡಿದ್ದಾರೆ.

ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಹಿಂದುಗಳ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ಸಂಸದೆ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ.

Leave A Reply

Your email address will not be published.