ಮಂಗಳೂರು : ಮಹಿಳಾ ಪ್ರಾಧ್ಯಾಪಕಿಗೆ ಮಾನಸಿಕ ಕಿರುಕುಳ ಪ್ರಕರಣ ; ಆರೋಪಿಗಳಿಗೆ ಜಾಮೀನು ಮಂಜೂರು

ಮಂಗಳೂರು : ಮಹಿಳಾ ಪ್ರಾಧ್ಯಾಪಕಿಗೆ ನಿರಂತರ ಮಾನಸಿಕ ಕಿರುಕುಳ ನೀಡಿ, ಅಲ್ಲಲ್ಲಿ ಭಿತ್ತಿಪತ್ರ ಹಂಚಿ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿಗಳಿಗೆ ನ್ಯಾಯಾಲಯ ಜಾಮೀನು ನೀಡಿದೆ.

ಕಾಲೇಜಿನ ಸಂಚಾಲಕ, ಅರ್ಥಶಾಸ್ತ್ರ ಉಪನ್ಯಾಸಕ ಬಂಟ್ವಾಳ ಸಿದ್ಧಕಟ್ಟೆ ಮೇಗಿನ ಉಳಿರೋಡಿ ನಿವಾಸಿ ಪ್ರದೀಪ್ ಪೂಜಾರಿ ಹಾಗೂ ಕ್ರೀಡಾ ತರಬೇತಿದಾರ ಹೆಬ್ರಿ ನಾಡಾಲು ನಿವಾಸಿ ತಾರಾನಾಥ ಬಿ.ಎಸ್.ಶೆಟ್ಟಿಗೆ ಎಂಬುವವರಿಗೆ ನ್ಯಾಯಾಲಯ ಜಾಮೀನು ನೀಡಿದೆ.

ಪ್ರಮುಖ ಆರೋಪಿ ಕಾಲೇಜಿನ ಸಂಚಾಲಕ ಬೆಳ್ತಂಗಡಿಯ ಲಾಯಿಲ ನಿವಾಸಿ ಪ್ರಕಾಶ್ ಶೆಣೈಗೆ ನ್ಯಾಯಾಲಯ ಕಳೆದ ಶುಕ್ರವಾರ ಜಾಮೀನು ನೀಡಿತ್ತು.

Leave A Reply

Your email address will not be published.