ಮಂಗಳೂರು: ಗುಟ್ಕಾ ಜಗಿದ ಚಾಲಕರಿಗೆ 5,000/- ದಂಡ ಜಡಿದ ಆರ್ ಟಿಒ ಅಧಿಕಾರಿಗಳು!

ಮಂಗಳೂರು: ಗುಟ್ಕಾ ಜಗಿಯುತ್ತ ಬಸ್ ಚಾಲನೆ ಮಾಡಿದ ಬಸ್ ಚಾಲಕರಿಗೆ ಮಂಗಳೂರು ಆರ್‌ಟಿಒ ಅಧಿಕಾರಿಗಳು ದಂಡ ವಿಧಿಸಿ ಶಾಕ್ ಕೊಟ್ಟಿದ್ದಾರೆ.

ಈ ಘಟನೆ ರಾತ್ರಿ ಬಿಜೈ ಬಳಿ ನಡೆದಿದೆ. ರಾತ್ರಿ ದಾಖಲೆ ತಪಾಸಣೆ ಸಂದರ್ಭ 2 ಬಸ್‌ಗಳ ಚಾಲಕರು ಗುಟ್ಕಾ ಜಗಿಯುತ್ತ ಅಧಿಕಾರಿಗಳ ಮುಂದೆ ಬಂದರು. ಇದನ್ನು ಗಮನಿಸಿದ ಆರ್‌ಟಿಒ ಅಧಿಕಾರಿಗಳು ಇಬ್ಬರೂ ಚಾಲಕರಿಗೂ ತಲಾ 5,000 ರೂ. ದಂಡ ವಿಧಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಆರ್‌ಟಿಒ ಆರ್.ಎಂ. ವರ್ಣೇಕರ್, “ಮದ್ಯ ಸೇವಿಸಿ ವಾಹನ ಚಲಾಯಿಸುವವರ ವಿರುದ್ಧ ಮಾತ್ರವಲ್ಲದೆ ಯಾವುದೇ ರೀತಿಯ ಅಮಲು ಪದಾರ್ಥಗಳನ್ನು ಸೇವಿಸಿ ಚಲಾಯಿಸುವವರ ವಿರುದ್ಧ ಕೂಡ ಪ್ರಕರಣ ದಾಖಲಿಸಿ, ದಂಡ ವಿಧಿಸಲು ಅವಕಾಶವಿದೆ. ಅದರಂತೆ ದಂಡ ವಿಧಿಸಲಾಗಿದೆ’ ಎಂದು ತಿಳಿಸಿದ್ದಾರೆ.

Leave A Reply

Your email address will not be published.