ಮಂಗಳೂರು : ನಾಗ ದೇವರ ಸಾನಿಧ್ಯ ಅಪವಿತ್ರಗೊಳಿಸಿದ ಪ್ರಕರಣ – ದುಷ್ಕರ್ಮಿಗಳ ಬಂಧನಕ್ಕೆ ರಾಮ್ ಸೇನಾ ಆಗ್ರಹ

ಪುರಾತನ ಕಾಲದಿಂದಲೂ ತುಳುನಾಡಿನ ಆರಾಧ್ಯ ದೇವರುಗಳಲ್ಲಿ ಒಂದಾದ ನಾಗದೇವರನ್ನು ಆರಾಧಿಸಿ ಬರುವ ಸ್ಥಳ ಇದಾಗಿದ್ದು, ಅಂಥ ದೇವರಿಗೆ ಅವಮಾನ ಮಾಡಿ ಅನಾಗರಿಕತೆ ಮೆರೆದ ಕಿಡಿಗೇಡಿಗಳ ಕೃತ್ಯವನ್ನು ರಾಮ್ ಸೇನಾ ತೀವ್ರವಾಗಿ ಖಂಡಿಸುತ್ತದೆ ಹಾಗೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದುಷ್ಕರ್ಮಿಗಳನ್ನು ಪತ್ತೆ ಹಚ್ಚಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ರಾಮ್ ಸೇನಾ ಅಧ್ಯಕ್ಷ ಸುಶಿತ್ ಸಾಲ್ಯಾನ್ ಆಗ್ರಹಿಸಿದ್ದಾರೆ.

ಘಟನೆ ವಿವರ : ಕಟೀಲುಮಲ್ಲಿಗೆಯಂಗಡಿಯ ಪಡುಸಾಂತ್ಯ ಭಂಡಾರಿ ಮನೆತನದ ನಾಗಬನದಲ್ಲಿದ್ದ ನಾಗನ ಕಲ್ಲುಗಳನ್ನು ದುಷ್ಕರ್ಮಿಗಳು ಬೇರೆ ಜಾಗದಲ್ಲಿ ಎಸೆದಿದ್ದಾರೆ. ರವಿವಾರ ಬೆಳಗ್ಗೆ ಮನೆತನದ ವ್ಯಕ್ತಿಯೊಬ್ಬರು ಈ ಜಾಗದಲ್ಲಿ ತೆರಳುತ್ತಿದ್ದ ವೇಳೆ ನಾಗನ ಕಲ್ಲು ಆವರಣದಿಂದ ಹೊರಗೆ ಬಿದ್ದಿರುವುದನ್ನು ಗಮನಿಸಿದ್ದಾರೆ. ಬಳಿಕ ಪರಿಶೀಲಿಸಿದಾಗ ನಾಗಬನದಲ್ಲಿ ಪ್ರತಿಷ್ಠೆ ಮಾಡಿದ ಜಾಗದಿಂದ 6 ನಾಗನ ಕಲ್ಲುಗಳನ್ನು ಎಸೆದು ಬೇರೆ ಬೇರೆ ಜಾಗದಲ್ಲಿ ಹಾಕಿರುವುದು ಗೊತ್ತಾಗಿದೆ.

Leave A Reply

Your email address will not be published.