ಬೈಕ್ ಗೆ ಡಿಕ್ಕಿ ಹೊಡೆದು,ನಿಯಂತ್ರಣ ತಪ್ಪಿ ಬಾವಿಗೆ ಬಿದ್ದ ಕಾರು!|ಬಾವಿಗೆ ಹಗ್ಗ ಇಳಿಸಿ ಕಾರಿನಲ್ಲಿದ್ದ ಮೂವರ ರಕ್ಷಣೆ

ಕಾಸರಗೋಡು: ಕಾರೊಂದು ಬೈಕ್ ಗೆ ಡಿಕ್ಕಿ ಹೊಡೆದ ಬಳಿಕ
ಚಾಲಕನ ನಿಯಂತ್ರಣ ತಪ್ಪಿ ನೇರವಾಗಿ ಮಸೀದಿ ಪಕ್ಕದ ಬಾವಿಗೆ ಬಿದ್ದ ಘಟನೆ ಮಂಗಳವಾರ ಕಾಸರಗೋಡು ಬಳಿಯ ಪೂಚಕ್ಕಾಡ್ ಎಂಬಲ್ಲಿ ನಡೆದಿದೆ.

ಉದುಮ ಭಾಗದಿಂದ ಬರುತ್ತಿದ್ದ ಕಾರೊಂದು ಪೂಚಕ್ಕಾಡ್ ಬಳಿ ಬೈಕೊಂದಕ್ಕೆ ಡಿಕ್ಕಿ ಹೊಡೆದಿದ್ದು,ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು ನೇರವಾಗಿ ರಸ್ತೆ ಪಕ್ಕದ ಬಾವಿಗೆ ಬಿದ್ದಿದೆ.ಕಾರಿನಲ್ಲಿ ಒಟ್ಟು ಮೂವರು ಯುವಕರು ಇದ್ದು, ರಕ್ಷಿಸಲಾಗಿದೆ.

ಈದುಲ್ ಫಿತ್ ಹಿನ್ನೆಲೆಯಲ್ಲಿ ಮಸೀದಿಯಲ್ಲಿ ಸಾಕಷ್ಟು
ಸಂಖ್ಯೆಯಲ್ಲಿ ಮುಸ್ಲಿಮರು ಇದ್ದಿದ್ದರಿಂದ,ತಕ್ಷಣ ಕಾರ್ಯಾಚರಣೆಗೆ ಇಳಿದು ಹಗ್ಗದ ಸಹಾಯದಿಂದ ಬಾವಿಗಿಳಿದು ಕಾರಿನಲ್ಲಿದ್ದವರನ್ನು ರಕ್ಷಿಸಿದ್ದಾರೆ. ಅವರಿಗೆ ಅಗ್ನಿಶಾಮಕ ಸಿಬ್ಬಂದಿ,ಪೊಲೀಸರು ಕೂಡ ಸಾಥ್ ನೀಡಿದ್ದಾರೆ.

Leave A Reply

Your email address will not be published.