ಮಂಗಳೂರು: ನಗರ ಹೊರವಲಯದ ಅಡ್ಯಾರು ಸಮೀಪ ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು, ಕಂಟೈನರ್ ನಡುವೆ ಅಪಘಾತ ನಡೆದಿದೆ.
ಕಾರು ಚಾಲಕ ಇಬ್ರಾಹಿಂ ಮಂಜೇಶ್ವರ ಸಮೀಪದ ಕುಂಜತ್ತೂರು ನಿವಾಸಿ ಎಂದು ತಿಳಿದು ಬಂದಿದೆ.
ಕಾರಿನಲ್ಲಿ 3 ಪ್ರಯಾಣಿಕರು ಪ್ರಯಾಣಿಸುತ್ತಿದ್ದು ಉಳಿದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.ಇವರನ್ನು ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.ಕಾರು ಚಾಲಕ ನಿದ್ದೆಯ ಮಂಪರಿನಲ್ಲಿ ಇದ್ದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದು ಎದುರಿನಿಂದ ಬರುತ್ತಿದ್ದ ಕಂಟೈನರ್ ಗೆ ಡಿಕ್ಕಿಯಾದ ಹೊಡೆತಕ್ಕೆ ಕಾರು ಚಾಲಕ ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಈ ಬಗ್ಗೆ ಸಂಚಾರ ದಕ್ಷಿಣ ಠಾಣೆಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.