ಮತ್ತೊಮ್ಮೆ ಬಜರಂಗದಳ ಕಾರ್ಯಕರ್ತನ ಮೇಲೆ ಅನ್ಯಕೋಮಿನ ಗುಂಪಿನಿಂದ ಹಲ್ಲೆ| ಶಿವಾಜಿ ಮೂರ್ತಿ ಭಗ್ನ

ಅನ್ಯಕೋಮಿನ ಗುಂಪೊಂದು ಹಿಂದೂ ಕಾರ್ಯಕರ್ತನ ಮೇಲೆ ಗಂಭೀರವಾಗಿ ಹಲ್ಲೆ ಮಾಡಿರುವ ಘಟನೆಯೊಂದು ಬೀದರ್ ನಲ್ಲಿ ನಡೆದಿದೆ.

ನೂರ್ ಖಾನ್ ಕಾಲೋನಿಯ ಜೈ ಭವಾನಿ ಫಾಸ್ಟ್ ಫುಡ್ ನಲ್ಲಿ ಈ ಘಟನೆ ನಡೆದಿದೆ. ಬಲರಾಮ್ ಎಂಬ ಯುವಕನ ಮೇಲೆ ಹಲ್ಲೆ ನಡೆಸಿದ್ದು, ಈ ಹಲ್ಲೆ ಉದ್ದೇಶಪೂರ್ವಕವಾಗಿಯೇ ನಡೆದಿದೆ ಎಂದು ಹೇಳಲಾಗುತ್ತಿದೆ. ಹೊಟೇಲ್ ನಲ್ಲಿದ್ದ ಶಿವಾಜಿ ಮೂರ್ತಿಯನ್ನು ಧ್ವಂಸ ಮಾಡಲಾಗಿದ್ದು, ಸದ್ಯ ಬಲರಾಮ್ ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾನೆ. ಈ ಸಂಬಂಧ ಹುಮ್ನಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಈಗಾಗಲೇ ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ.

ಬಲರಾಮ್ ಗೋ ರಕ್ಷಣೆ ಸೇರಿದಂತೆ ಹಿಂದೂ ಸಂಘಟನೆಯಲ್ಲಿ ಸಕ್ರೀಯರಾಗಿದ್ದ ಎಂಬ ಕಾರಣಕ್ಕೆ ಅನ್ಯಕೋಮಿನ ಜನ ಗಂಭೀರವಾಗಿ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

Leave A Reply

Your email address will not be published.