ಬೆಂಗಳೂರು : ಮೇ.10ರೊಳಗೆ ರಾಜ್ಯದಲ್ಲಿ ಸಂಪುಟ ವಿಸ್ತರಣೆ ಇಲ್ಲವೇ ಪುನಾರಚನೆಯಾಗಲಿದೆ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಮಾಹಿತಿ ನೀಡಿದರು.
ದುಬೈಗೆ ತೆರಳುವ ಮುನ್ನ ಬೆಂಗಳೂರಿನಲ್ಲಿರುವ ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಮಾತನಾಡಿದ ಅವರು, ಮುಂದಿನ ಮೂರು ದಿನಗಳಲ್ಲಿ ಬೊಮ್ಮಾಯಿ ಸಂಪುಟದ ವಿಸ್ತರಣೆ ಇಲ್ಲವೇ ಪುನಾರಚನೆ ಕಾರ್ಯ ನಡೆಯಲಿದೆ.
ಸಂಪುಟ ವಿಸ್ತರಣೆಯಲ್ಲಿ ಹೈಕಮಾಂಡ್ನ ಯಾವುದೇ ನಿರ್ಧಾರಗಳಿಗೆ ನಾವೆಲ್ಲ ಬದ್ಧ ಎಂದು ಹೇಳಿದ್ದಾರೆ.