ಧ್ವನಿ ವರ್ಧಕ ಬಳಕೆ,ಕೋರ್ಟ್ ಆದೇಶ ಪಾಲಿಸಲು ಬದ್ಧ-ಮುಹಮ್ಮದ್ ಮಸೂದ್| ಶಾಂತಿ ಕದಡುವವರ ವಿರುದ್ಧ ಕ್ರಮಕ್ಕೆ ಆಗ್ರಹ

ಮಂಗಳೂರು, ಮೇ.11;ರಾಜ್ಯದಲ್ಲಿ ಧ್ವನಿವರ್ಧಕ ಬಳಕೆಯ ಬಗ್ಗೆ
ಸುಪ್ರೀಂ ಕೋರ್ಟ್ ಈ ಹಿಂದೆ ಹೇಳಿದಂತೆ ಬೆಳಿಗ್ಗೆ 6 ರಿಂದ ರಾತ್ರಿ 10ರವರೆಗೆ ನಿರ್ದಿಷ್ಟ ಡೆಸಿಬಲ್ ರಾತ್ರಿ 10 ರಿಂದ ಬೆಳಿಗ್ಗೆ 6ರವರೆಗೆ ನಿರ್ದಿಷ್ಟ మిತಿಯ ಧ್ವನಿವರ್ಧಕ ಬಳಸಲು ಸೂಚಿಸಿದ್ದು, ಅದಕ್ಕೆ ಸೂಕ್ತ ಸುತ್ತೋಲೆ ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ ಅದಕ್ಕೆ ನಮ್ಮ ಸಮ್ಮತಿ ಇದೆ.
ಶ್ರೀರಾಮಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಸೇರಿದಂತೆ ಕೆಲವರು ಅಝಾನ್ ಸಮಯದಲ್ಲಿ ಹನುಮಾನ್ ಚಾಲಿಸ್, ಭಜನೆ, ಸುಪ್ರಭಾತ, ಕೆಲವು ವಿಚಾರಗಳನ್ನು ಮಾಡುವುದಾಗಿ ಆದೇಶವನ್ನು ಕೊಟ್ಟಿರು ತ್ತಾರೆ. ಇದು ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಹುನ್ನಾರವಾಗಿದೆ. ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿಯವರು ಪ್ರಮೋದ್ ಮುತಾಲಿಕರವರನ್ನು ಉಡುಪಿ ಪ್ರವೇಶಕ್ಕೆ ನಿರ್ಬಂಧಿಸಿದ್ದು, ಅನೇಕ ನಾಯಕರುಗಳು ಅದರಲ್ಲೂ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿಯವರು ಸಮಾಜದಲ್ಲಿ ಶಾಂತಿ ಕದಡುತ್ತಿರುವ ಪ್ರಮೋದ್ ಮುತಾಲಿಕ್ ಸೇರಿದಂತೆ ಇನ್ನಿತರರನ್ನು ಒದ್ದು ಒಳಗೆ ಹಾಕಬೇಕು ಎಂದು ಹೇಳಿಕೆ ನೀಡಿದ್ದರು.ಸಮಾಜ ದಲ್ಲಿ ಶಾಂತಿ ಕದಡುವವರ ವಿರುದ್ಧ ಸರ್ಕಾರ ಸೂಕ್ತ ಕ್ರಮ ಕೈ ಗೊಳ್ಳಬೇಕು ಎಂದು ಮಸೂದ್ ತಿಳಿಸಿದ್ದಾರೆ.
ವಿಧಾನ ಪರಿಷತ್‌ ನಾಯಕರಾದ ಬಿ.ಕೆ, ಹರಿಪ್ರಸಾದ್‌ರವರು ಸೌಹಾರ್ದ ವಾತಾವರಣ ಕೆಡಿಸಿ ಅಶಾಂತಿ ಸೃಷ್ಟಿಸುವ ಭಯೋತ್ಪಾದಕರ ವಿರುದ್ಧ ರಾಷ್ಟ್ರದ್ರೋಹ ಪ್ರಕರಣ ದಾಖಲಿಸಿ ಬಂಧಿಸಬೇಕೆಂದು ಆಗ್ರಹಿಸಿದ್ದರು.ದೇಶದ್ರೋಹಿ ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿರುವ ಹಲವಾರು ಕ್ರಿಮಿನಲ್ ಪ್ರಕರಣಗಳನ್ನು ಹೊಂದಿರುವ ಪ್ರಮೋದ್ ಮುತಾಲಿಕ್ ಮಂಗಳೂರಿಗೆ ಬಂದು ನಮ್ಮ ಮಂಗಳೂರಿನ ‘ಒಳ್ಳೆಯ ನಡತೆಯ ಜನರೊಂದಿಗೆ ಲವಲವಿಕೆಯಿಂದ ಬೆರೆಯುವ ಪೊಲೀಸ್ ಆಯುಕ್ತ ಶಶಿಕು ಮಾರ್ ರವರು ಮುತಾಲಿಕರವರಿಗೆ ತನ್ನ ಕುರ್ಚಿ ಬಿಟ್ಟು ಬಂದು ಸ್ವಾಗತಿಸುತ್ತಾರೆ.
ಸಾಮಾನ್ಯವಾಗಿ ಆಯುಕ್ತರು ಮನವಿ ನೀಡಲು ಆಗಮಿಸುವವರೊಂದಿಗೆ ಮಾತುಕತೆ ಮಾಡುವುದು ಸಹಜ. ಆದರೆ ಮುತಾಲಿಕರವರನ್ನು ಕಂಡೊಡನೆ ಕುರ್ಚಿ ಬಿಟ್ಟು ಬಂದು ಸ್ವಾಗತಿಸಿರುವುದನ್ನು ನಾವು ಖಂಡಿಸುತ್ತೇವೆ ಎಂದು ಮುಸ್ಲಿಂ ಸೆಂಟ್ರಲ್ ಕಮಿಟಿಯ ಅಧ್ಯಕ್ಷ ಹಾಜಿ ಕೆ.ಎಸ್. ಮುಹ ಮ್ಮದ್ ಮಸೂದ್ ತಿಳಿಸಿದ್ದಾರೆ.

ದ.ಕ.,ಉಡುಪಿ ಜಿಲ್ಲೆಯ ಮುಸ್ಲಿಂ ಸೆಂಟ್ರಲ್ ಕಮಿಟಿಯು ಆದೇಶವನ್ನು ಪಾಲಿಸಬೇಕೆಂದು ಎಲ್ಲಾ ಜಮಾಅತಿಗೆ ಮನವಿ ಮಾಡಿರುತ್ತೇವೆ ಎಂದು ಮಸೂದ್ ತಿಳಿಸಿದ್ದಾರೆ.
ಧ್ವನಿವರ್ಧಕ ವಿಷಯದಲ್ಲಿ ರಾಮಸೇನೆಯ ಮುತಾಲಿಕ್‌ರವರು ಮುಸ್ಲಿಂ ಜನಾಂಗ ದವರನ್ನು ದೇಶದ್ರೋಹಿ ಎಂದು ಹೇಳಿರುತ್ತಾರೆ ಈ ಬಗ್ಗೆ ಮುತಾಲಿಕ್ ವಿರುದ್ಧ ಕ್ರಮ ಕೈ ಗೊಳ್ಳಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಆಗ್ರಹಿಸುವುದಾಗಿ ಮಸೂದ್ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಸರ್ಕಾರ ಕೊಟ್ಟರುವ ಸೂಚನೆಗಳನ್ನುನಾನು ಕುದ್ರೋಳಿ ಮಸೀದಿಯ ಅಧ್ಯಕ್ಷನಾಗಿ ಪಾಲಿಸಲು ತಿಳಿಸಿದ್ದೇನೆ ಮತ್ತು ಅಕ್ಕಪಕ್ಕದ ಬರ್ಕೆ ಪೊಲೀಸ್ ಠಾಣೆ, ಬಂದರು ಪೊಲೀಸ್ ಠಾಣೆ ಯಾರಾದರೂ ಕಾನೂನು ಕೈಗೆತ್ತಿಕೊಂಡರೆ ಕೂಡಲೇ ಕ್ರಮ ಜರುಗಿಸುವಂತೆ ಮನವಿ ಮಾಡಿದ್ದೇನೆ.
ಹಿಂದೂ ಸಮಾಜೋತ್ಸವ, ಬಾಬರಿ ಮಸೀದಿ ವಿಷಯದಲ್ಲಿ ಆಗಿನ ಶಾಸಕ ಮಾನ್ಯ ಯೋಗೀಶ್ ಭಟ್‌ರವರೊಂದಿಗೆ ಮಾತನಾಡುವ ಸಮಯದಲ್ಲಿ ಮೊದಲಿನ ಸಭೆ, ಯೋಗೀಶ್ ಭಟ್‌ರವರ ಮನೆಯಲ್ಲಿ ನಡೆಯಿತು. ಎರಡನೇ ಸಭೆ ನನ್ನ ಮನೆಯಲ್ಲಿ ಜರುಗಿದ್ದು ಆ ಸಭೆಯಲ್ಲಿ ಅಂದಿನ ದ.ಕ. ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ನಾಗರಾಜ್ ಶೆಟ್ಟಿ ಮತ್ತು ಜಿಲ್ಲಾಧಿಕಾರಿ, ಐ.ಜೆ. ಎಲ್ಲರೂ ಭಾಗವಹಿಸಿದ್ದು, ಈ ಸಭೆಯಲ್ಲಿ ನಾಗರಾಜ್ ಶೆಟ್ಟಿಯವರು ಸಮಾಜೋತ್ಸವಕ್ಕೆ ನೀವು ನಮಗೆ ಲಿಂಬೆ ಶರಬತ್ತು ನೀಡಬೇಕೆಂದು ಹೇಳಿದಾಗ ನಾವೆಲ್ಲ ಸೇರಿ ಲಿಂಬೆ ಮತ್ತು ಸಕ್ಕರೆಯನ್ನು ಕೊಟ್ಟಿರುತ್ತೇವೆ.
ಈ ನಿಟ್ಟಿನಲ್ಲಿ ಬೆಂಬಲ ನೀಡಿದ ಆಗಿನ ಮುಖ್ಯಮಂತ್ರಿಯಾದ ಬಿ.ಎಸ್. ಯಡಿಯೂ ರಪ್ಪರವರಿಗೆ ಕೃತಜ್ಞತೆಗಳು.ಇಸ್ಲಾಂ ಧರ್ಮವು ಶಾಂತಿ ಕಾಪಾಡುವ ಧರ್ಮ ಎಂದು ಅಲ್‌ಹಾಜ್ ಕೆ.ಎಸ್. ಮೊಹಮ್ಮದ್ ಮಸೂದ್ ತಿಳಿಸಿದ್ದಾರೆ.
ಸುದ್ದಿ ಗೋಷ್ಠಿಯಲ್ಲಿ ಮುಸ್ಲಿಂ ಸೆಂಟ್ರಲ್ ಕಮಿಟಿ ಉಪಾಧ್ಯಕ್ಷ ರಾದ ಬಿ.ಎ.ಮುಮ್ತಾಜ್ ಅಲಿ,ಅಶ್ರಫ್ ಕೆ,ಬಾಷಾ ತಂಞಳ್, ಸಿ.ಮುಹಮ್ಮದ್ ಪುತ್ತುಬಾವ ಹಾಜಿ ಮೊದಲಾದವರು ಉಪಸ್ಥಿತರಿದ್ದರು.

Leave A Reply

Your email address will not be published.